32.1 C
ಪುತ್ತೂರು, ಬೆಳ್ತಂಗಡಿ
September 15, 2026
Uncategorized

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಸಾಧಕ ವಿದ್ಯಾರ್ಥಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ವತಿಯಿಂದ ಭಕ್ತಿಭಾವದಿಂದ ‘ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ’ ಕಾರ್ಯಕ್ರಮ ಎ.26 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರುಗಿತು.

ಬೆಳಿಗ್ಗೆ 10.30ರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಆರಂಭಗೊಂಡು ಮಧ್ಯಾಹ್ನ 12.30ಕ್ಕೆ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಂಚನಾ ಸಿ. ಇವಳನ್ನು‌ಸಂಘದ ವತಿಯಿಂದ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸೋಮಯ್ಯ ಮೂಲ್ಯ ಅನೈನಡೆ ಮಾತನಾಡಿ, ಸಂಘದ ವತಿಯಿಂದ ಮುಂದೆ ನಡೆಯಲಿರುವ ವಿವಿಧ ಯೋಜನೆಗಳಿಗೆ ಪೂರಕವಾಗಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಸಲಾಗಿದೆ. ಸಮಾಜ ಬಾಂಧವರು ಸಂಘಟಿತರಾಗಬೇಕು, ಸಂಘದ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುವುದು. ಜೊತೆಗೆ ಅನಾರೋಗ್ಯಕ್ಕೆ ಒಳಗಾದವರಿಗೆ ಸಹಕಾರ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಹೊಸದಾಗಿ ಖರೀದಿಸಿದ ಜಾಗದಲ್ಲಿ ಸುಮಾಜ ಭವನ ನಿರ್ಮಾಣಕ್ಕೆ ಎಲ್ಲರ ಒಂದೇ ಮನಸ್ಸಿನಿಂದ ಸಹಕಾರ ಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕ ‌ಪ್ರತಾಪಸಿಂಹ ನಾಯಕ್, ಧಾಮಿ೯ಕ‌ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ಅಧ್ಯಕ್ಷ ರಕ್ಷೀತ್ ಶಿವರಾಂ, ಪುತ್ತೂರು ಕುಂಬಾರರ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಮೂಲ್ಯ ಪೆರುವಾಯಿ ಭೇಟಿ ನೀಡಿದರು. ಹೆಚ್. ಪದ್ಮಕುಮಾರ್,ಸಂಘದ ಪ್ರಧಾನ ಕಾರ್ಯದರ್ಶಿ ಉಪನ್ಯಾಸಕ ಸುಧೀರ್ ಕೆ.ಎನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!