August 1, 2026
Uncategorized

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಸಾಧಕ ವಿದ್ಯಾರ್ಥಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ವತಿಯಿಂದ ಭಕ್ತಿಭಾವದಿಂದ ‘ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ’ ಕಾರ್ಯಕ್ರಮ ಎ.26 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರುಗಿತು.

ಬೆಳಿಗ್ಗೆ 10.30ರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಆರಂಭಗೊಂಡು ಮಧ್ಯಾಹ್ನ 12.30ಕ್ಕೆ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಂಚನಾ ಸಿ. ಇವಳನ್ನು‌ಸಂಘದ ವತಿಯಿಂದ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸೋಮಯ್ಯ ಮೂಲ್ಯ ಅನೈನಡೆ ಮಾತನಾಡಿ, ಸಂಘದ ವತಿಯಿಂದ ಮುಂದೆ ನಡೆಯಲಿರುವ ವಿವಿಧ ಯೋಜನೆಗಳಿಗೆ ಪೂರಕವಾಗಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಸಲಾಗಿದೆ. ಸಮಾಜ ಬಾಂಧವರು ಸಂಘಟಿತರಾಗಬೇಕು, ಸಂಘದ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುವುದು. ಜೊತೆಗೆ ಅನಾರೋಗ್ಯಕ್ಕೆ ಒಳಗಾದವರಿಗೆ ಸಹಕಾರ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಹೊಸದಾಗಿ ಖರೀದಿಸಿದ ಜಾಗದಲ್ಲಿ ಸುಮಾಜ ಭವನ ನಿರ್ಮಾಣಕ್ಕೆ ಎಲ್ಲರ ಒಂದೇ ಮನಸ್ಸಿನಿಂದ ಸಹಕಾರ ಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕ ‌ಪ್ರತಾಪಸಿಂಹ ನಾಯಕ್, ಧಾಮಿ೯ಕ‌ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ಅಧ್ಯಕ್ಷ ರಕ್ಷೀತ್ ಶಿವರಾಂ, ಪುತ್ತೂರು ಕುಂಬಾರರ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಮೂಲ್ಯ ಪೆರುವಾಯಿ ಭೇಟಿ ನೀಡಿದರು. ಹೆಚ್. ಪದ್ಮಕುಮಾರ್,ಸಂಘದ ಪ್ರಧಾನ ಕಾರ್ಯದರ್ಶಿ ಉಪನ್ಯಾಸಕ ಸುಧೀರ್ ಕೆ.ಎನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya
error: Content is protected !!