26.1 C
ಪುತ್ತೂರು, ಬೆಳ್ತಂಗಡಿ
June 12, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿರಾಜ್ಯ ಸುದ್ದಿವರದಿ

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಸಾರಾಂಶ: ದೂರುದಾರರಾದ ಪಿ.ಆರ್.ಮನೋಹರ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ನೀಡಿದ ಪಿರ್ಯಾದಿಯ ಸಾರಾಂಶವೇನೆಂದರೆ ದಿನಾಂಕ: 24.04.2026 ರಂದು 12:30 ಗಂಟೆಗೆ ಮನೋಹರ ಹಾಗೂ ಅವರ ವಕೀಲೆಯಾದ ಟಿಸ್ಮಿ ಮತ್ತು ಶಾಂತಲಾ ರಾಜೇಶ್ ಪ್ರಭು ಹಾಗೂ ಅವರ ಕೆಲಸದವರ ಜೊತೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ಅವರ ಪಟ್ಟಾ ಜಾಗಕ್ಕೆ ಭೇಟಿ ನೀಡಿದಾಗ ಆರೋಪಿದಾರರಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ಶಶಿರಾಜ್ ಶೆಟ್ಟಿ ಇವರುಗಳು ಆಕ್ರಮವಾಗಿ ಪ್ರವೇಶಿಸಿ ಕೈಯಿಂದ ಹಾಗೂ ಲೈಸನ್ಸ್ ಇಲ್ಲದ ಗನ್ ನಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮನೋಹರ್ ನೀಡಿದ ದೂರಿ‌ನ ಮೇರೆಗೆ ಎ.26 ರಂದು ಆರೋಪಿಗಳಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ, ಶಶಿರಾಜ್ ಶೆಟ್ಟಿ ಹಾಗೂ ಇತರರ ಮೇಲೆ BNS- 2023(U/s-189(2),191(2), 115(2), 118(1),329(3),351(2),352,190), ARMS ACT 1959 (U/s-25(1)(A)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya
error: Content is protected !!