July 27, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿರಾಜ್ಯ ಸುದ್ದಿವರದಿ

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಸಾರಾಂಶ: ದೂರುದಾರರಾದ ಪಿ.ಆರ್.ಮನೋಹರ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ನೀಡಿದ ಪಿರ್ಯಾದಿಯ ಸಾರಾಂಶವೇನೆಂದರೆ ದಿನಾಂಕ: 24.04.2026 ರಂದು 12:30 ಗಂಟೆಗೆ ಮನೋಹರ ಹಾಗೂ ಅವರ ವಕೀಲೆಯಾದ ಟಿಸ್ಮಿ ಮತ್ತು ಶಾಂತಲಾ ರಾಜೇಶ್ ಪ್ರಭು ಹಾಗೂ ಅವರ ಕೆಲಸದವರ ಜೊತೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ಅವರ ಪಟ್ಟಾ ಜಾಗಕ್ಕೆ ಭೇಟಿ ನೀಡಿದಾಗ ಆರೋಪಿದಾರರಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ಶಶಿರಾಜ್ ಶೆಟ್ಟಿ ಇವರುಗಳು ಆಕ್ರಮವಾಗಿ ಪ್ರವೇಶಿಸಿ ಕೈಯಿಂದ ಹಾಗೂ ಲೈಸನ್ಸ್ ಇಲ್ಲದ ಗನ್ ನಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮನೋಹರ್ ನೀಡಿದ ದೂರಿ‌ನ ಮೇರೆಗೆ ಎ.26 ರಂದು ಆರೋಪಿಗಳಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ, ಶಶಿರಾಜ್ ಶೆಟ್ಟಿ ಹಾಗೂ ಇತರರ ಮೇಲೆ BNS- 2023(U/s-189(2),191(2), 115(2), 118(1),329(3),351(2),352,190), ARMS ACT 1959 (U/s-25(1)(A)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya
error: Content is protected !!