32.1 C
ಪುತ್ತೂರು, ಬೆಳ್ತಂಗಡಿ
September 15, 2026
Uncategorized

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಸಾಧಕ ವಿದ್ಯಾರ್ಥಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ವತಿಯಿಂದ ಭಕ್ತಿಭಾವದಿಂದ ‘ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ’ ಕಾರ್ಯಕ್ರಮ ಎ.26 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರುಗಿತು.

ಬೆಳಿಗ್ಗೆ 10.30ರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಆರಂಭಗೊಂಡು ಮಧ್ಯಾಹ್ನ 12.30ಕ್ಕೆ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಂಚನಾ ಸಿ. ಇವಳನ್ನು‌ಸಂಘದ ವತಿಯಿಂದ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸೋಮಯ್ಯ ಮೂಲ್ಯ ಅನೈನಡೆ ಮಾತನಾಡಿ, ಸಂಘದ ವತಿಯಿಂದ ಮುಂದೆ ನಡೆಯಲಿರುವ ವಿವಿಧ ಯೋಜನೆಗಳಿಗೆ ಪೂರಕವಾಗಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಸಲಾಗಿದೆ. ಸಮಾಜ ಬಾಂಧವರು ಸಂಘಟಿತರಾಗಬೇಕು, ಸಂಘದ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುವುದು. ಜೊತೆಗೆ ಅನಾರೋಗ್ಯಕ್ಕೆ ಒಳಗಾದವರಿಗೆ ಸಹಕಾರ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಹೊಸದಾಗಿ ಖರೀದಿಸಿದ ಜಾಗದಲ್ಲಿ ಸುಮಾಜ ಭವನ ನಿರ್ಮಾಣಕ್ಕೆ ಎಲ್ಲರ ಒಂದೇ ಮನಸ್ಸಿನಿಂದ ಸಹಕಾರ ಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕ ‌ಪ್ರತಾಪಸಿಂಹ ನಾಯಕ್, ಧಾಮಿ೯ಕ‌ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ಅಧ್ಯಕ್ಷ ರಕ್ಷೀತ್ ಶಿವರಾಂ, ಪುತ್ತೂರು ಕುಂಬಾರರ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಮೂಲ್ಯ ಪೆರುವಾಯಿ ಭೇಟಿ ನೀಡಿದರು. ಹೆಚ್. ಪದ್ಮಕುಮಾರ್,ಸಂಘದ ಪ್ರಧಾನ ಕಾರ್ಯದರ್ಶಿ ಉಪನ್ಯಾಸಕ ಸುಧೀರ್ ಕೆ.ಎನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya

ಗುರುವಾಯನಕೆರೆ : ಗೆಳೆಯರ ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya
error: Content is protected !!