36.1 C
ಪುತ್ತೂರು, ಬೆಳ್ತಂಗಡಿ
April 26, 2026
Uncategorized

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಸಾಧಕ ವಿದ್ಯಾರ್ಥಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ವತಿಯಿಂದ ಭಕ್ತಿಭಾವದಿಂದ ‘ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ’ ಕಾರ್ಯಕ್ರಮ ಎ.26 ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರುಗಿತು.

ಬೆಳಿಗ್ಗೆ 10.30ರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಆರಂಭಗೊಂಡು ಮಧ್ಯಾಹ್ನ 12.30ಕ್ಕೆ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಂಚನಾ ಸಿ. ಇವಳನ್ನು‌ಸಂಘದ ವತಿಯಿಂದ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸೋಮಯ್ಯ ಮೂಲ್ಯ ಅನೈನಡೆ ಮಾತನಾಡಿ, ಸಂಘದ ವತಿಯಿಂದ ಮುಂದೆ ನಡೆಯಲಿರುವ ವಿವಿಧ ಯೋಜನೆಗಳಿಗೆ ಪೂರಕವಾಗಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಸಲಾಗಿದೆ. ಸಮಾಜ ಬಾಂಧವರು ಸಂಘಟಿತರಾಗಬೇಕು, ಸಂಘದ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುವುದು. ಜೊತೆಗೆ ಅನಾರೋಗ್ಯಕ್ಕೆ ಒಳಗಾದವರಿಗೆ ಸಹಕಾರ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಹೊಸದಾಗಿ ಖರೀದಿಸಿದ ಜಾಗದಲ್ಲಿ ಸುಮಾಜ ಭವನ ನಿರ್ಮಾಣಕ್ಕೆ ಎಲ್ಲರ ಒಂದೇ ಮನಸ್ಸಿನಿಂದ ಸಹಕಾರ ಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕ ‌ಪ್ರತಾಪಸಿಂಹ ನಾಯಕ್, ಧಾಮಿ೯ಕ‌ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ಅಧ್ಯಕ್ಷ ರಕ್ಷೀತ್ ಶಿವರಾಂ, ಪುತ್ತೂರು ಕುಂಬಾರರ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಮೂಲ್ಯ ಪೆರುವಾಯಿ ಭೇಟಿ ನೀಡಿದರು. ಹೆಚ್. ಪದ್ಮಕುಮಾರ್,ಸಂಘದ ಪ್ರಧಾನ ಕಾರ್ಯದರ್ಶಿ ಉಪನ್ಯಾಸಕ ಸುಧೀರ್ ಕೆ.ಎನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya
error: Content is protected !!