24.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಶ್ರೀಧರ ಮುಗೇರ ಎಂಬಾತನ ಸಂಶಯಾಸ್ಪದ ರೀತಿಯಲ್ಲಿ ಕೆರೆಯಲ್ಲಿ ಶವ ಸಿಕ್ಕ ಪ್ರಕರಣ ನಡೆದು ವರ್ಷ ಕಳೆದರೂ ಇನ್ನೂ ಸರಿಯಾದ ತನಿಖೆ ನಡೆದಿಲ್ಲ. ತಕ್ಷಣ ಆರೋಪಿಗಳನ್ನು ಪತ್ತೆ ಹಚ್ಚಬೇಕು ಎಂಬ ವಿಚಾರ ಸೋಮವಾರ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆಯಲ್ಲಿ ಪ್ರಸ್ತಾಪವಾಯಿತು.

ದಲಿತ ಮುಖಂಡ ಸಂಜೀವ ಆರ್.ಕೇಳಿದ ಈ ಪ್ರಶ್ನೆಗೆ ಡಿವೈಎಸ್ಪಿ ರೋಹಿಣಿ ಸಿ.ಕೆ.ಉತ್ತರಿಸಿ ಆತ ಬಳಸಿದ ಮೊಬೈಲ್ ಫೋನ್ ಮಾಹಿತಿ ಸಂಗ್ರಹವಾಗುತ್ತಿದ್ದು, ಅದರ ವರದಿ ಇನ್ನು ಬಂದಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.
ಬೆಳಾಲಿನಲ್ಲಿ ಕಳೆದ ಜುಲೈ ತಿಂಗಳಲ್ಲಿ ವೀಣಾ ಎಂಬಾಕೆಯ ಶವ ಮನೆಯ ಬಾವಿಯಲ್ಲಿ ಪತ್ತೆಯಾದ ಪ್ರಕರಣವು ಸೂಕ್ತ ರೀತಿಯಲ್ಲಿ ತನಿಖೆಯಾಗಬೇಕು ಎಂದು ಸೇಸಪ್ಪ ನಲ್ಕೆ ಅಳದಂಗಡಿ ಒತ್ತಾಯಿಸಿದರು. ಪ್ರಕರಣದ ತನಿಖೆ ನಡೆಯುತ್ತಿರುವ ಬಗ್ಗೆ ಮತ್ತು ಘಟನೆಯ ನಂತರ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಪುತ್ತೂರು ವಿವೇಕಾನಂದ ಆಶ್ರಮಕ್ಕೆ ಸೇರಿಸಲಾಗಿತ್ತು. ಇದೀಗ ಮಗುವಿನ ಅಜ್ಜ ನಾಗೇಶ್ ಅವರು ಕಾನೂನು ಪ್ರಕಾರ ಮಗುವನ್ನು ಪಡೆದುಕೊಂಡಿದ್ದಾರೆ ಎಂದು ಧರ್ಮಸ್ಥಳ ಪಿಎಸ್‌ಐ ಸಮರ್ಥ ಆರ್ ಗಾಣಿಗೇರ್ ಸಭೆಗೆ ತಿಳಿಸಿದರು.

ತಾಲೂಕಿನಲ್ಲಿ ಗಾಂಜಾ ಮಾದಕ ದ್ರವ್ಯಗಳ, ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಲಾ-ಕಾಲೇಜು ಪರಿಸರಕ್ಕೂ ಗಾಂಜಾ ವಾಸನೆ ಹರಡಿರುವುದು ಖಂಡನೀಯ.ಗಾಂಜಾ ಪೂರೈಕೆದಾರರನ್ನು ಪತ್ತೆ ಹಚ್ಚುವಂತೆ ಬಿ.ಕೆ ವಸಂತ ಆಗ್ರಹಿಸಿದರು.
ಲಾಯಿಲ ದರ್ಪಿಂಜೆ ಸೇತುವೆಯಲ್ಲಿ ಮದ್ಯಪಾನ ಮಾಡುತ್ತಾ ಮಜಾ ಮಾಡುವ ಗುಂಪು ಸಾರ್ವಜನಿಕರ ಶಾಂತಿಭಂಗಕ್ಕೆ ಕಾರಣವಾಗುವುದಲ್ಲದೆ, ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿರುವ ಕುರಿತು ಶೇಖರ ಲಾಯಿಲ ಸಭೆಯ ಗಮನಕ್ಕೆ ತಂದರು. ಅಂಥವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಲಾಯಿತು.

ಸಿ. ಕೆ.ಚಂದ್ರಕಲಾ ಮಾತನಾಡುತ್ತಾ ಯುವಜನರು ದುಷ್ಚಟಗಳಿಗೆ ಬಲಿಯಾಗಿ ದಾರಿ ತಪ್ಪುತ್ತಿದ್ದಾರೆ. ಉಜಿರೆಯಲ್ಲಿ ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಲು ಯತ್ನಿಸಿದ ಘಟನೆ ಅತ್ಯಂತ ಅಪಾಯಕಾರಿ. ಪೋಲಿಸ್ ಇಲಾಖೆ ದಲಿತ ಕಾಲನಿಗಳಿಗೆ ಭೇಟಿ ನೀಡಿ ಕಾನೂನು ಮಾಹಿತಿ ನೀಡಬೇಕು ಎಂದರು. ಮೊದಲಿಗೆ ಡಿವೈಎಸ್ಪಿ ಕಚೇರಿಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಸವಿತಾ ಶೆಟ್ಟಿ ಸ್ವಾಗತಿಸಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ ಐ ಸಮರ್ಥ್ ಆರ್ . ಗಾಣಿಗೇರ್ ವಂದಿಸಿದರು

Related posts

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
error: Content is protected !!