July 27, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ಅಪರಿಚಿತ ಸುಮಾರು 40 ರಿಂದ 45 ವರ್ಷದ ಗಂಡಸಿನ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ನೀರಿನ ಡ್ಯಾಂ ನ ನೀರಿನಲ್ಲಿ ಎ.27 ರಂದು ಬೆಳಗ್ಗೆ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತವ್ಯಕ್ತಿಯ ಎತ್ತರ 5.7 ಅಡಿ, ದಪ್ಪ ಶರೀರ, ಎಣ್ಣೆ ಕಪ್ಪು ಮೈಬಣ್ಣ, ಅಗಲ ಮುಖ, ಮುಖದಲ್ಲಿ ಕಪ್ಪು ಮಿಶ್ರಿತ ಬಿಳಿ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ಮಿಶ್ರಿತ ಕಪ್ಪು ಕೂದಲು ಇರುವುದು ಕಂಡು ಬರುತ್ತದೆ.ಮೃತದೇಹದ ಮೈಮೇಲೆ ಬಿಳಿ ಬಣ್ಣದಲ್ಲಿ ನೀಲಿ ಬಣ್ಣದ ಅಡ್ಡ ಹಾಗೂ ಉದ್ದ ಗೆರೆಗಳಿರುವ ತುಂಬು ತೋಳಿನ ಶರ್ಟ್‌-1, ಕಾಪಿ ಬಣ್ಣದ ಪ್ಯಾಂಟ್‌ ಧರಿಸಿರುತ್ತಾರೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500 ಗೆ ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ಧರ್ಮಸ್ಥಳ ಪೊಲೀಸರು ತಿಳಿಸಿದ್ದಾರೆ.

Related posts

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!