24.5 C
ಪುತ್ತೂರು, ಬೆಳ್ತಂಗಡಿ
June 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಶ್ರೀಧರ ಮುಗೇರ ಎಂಬಾತನ ಸಂಶಯಾಸ್ಪದ ರೀತಿಯಲ್ಲಿ ಕೆರೆಯಲ್ಲಿ ಶವ ಸಿಕ್ಕ ಪ್ರಕರಣ ನಡೆದು ವರ್ಷ ಕಳೆದರೂ ಇನ್ನೂ ಸರಿಯಾದ ತನಿಖೆ ನಡೆದಿಲ್ಲ. ತಕ್ಷಣ ಆರೋಪಿಗಳನ್ನು ಪತ್ತೆ ಹಚ್ಚಬೇಕು ಎಂಬ ವಿಚಾರ ಸೋಮವಾರ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆಯಲ್ಲಿ ಪ್ರಸ್ತಾಪವಾಯಿತು.

ದಲಿತ ಮುಖಂಡ ಸಂಜೀವ ಆರ್.ಕೇಳಿದ ಈ ಪ್ರಶ್ನೆಗೆ ಡಿವೈಎಸ್ಪಿ ರೋಹಿಣಿ ಸಿ.ಕೆ.ಉತ್ತರಿಸಿ ಆತ ಬಳಸಿದ ಮೊಬೈಲ್ ಫೋನ್ ಮಾಹಿತಿ ಸಂಗ್ರಹವಾಗುತ್ತಿದ್ದು, ಅದರ ವರದಿ ಇನ್ನು ಬಂದಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.
ಬೆಳಾಲಿನಲ್ಲಿ ಕಳೆದ ಜುಲೈ ತಿಂಗಳಲ್ಲಿ ವೀಣಾ ಎಂಬಾಕೆಯ ಶವ ಮನೆಯ ಬಾವಿಯಲ್ಲಿ ಪತ್ತೆಯಾದ ಪ್ರಕರಣವು ಸೂಕ್ತ ರೀತಿಯಲ್ಲಿ ತನಿಖೆಯಾಗಬೇಕು ಎಂದು ಸೇಸಪ್ಪ ನಲ್ಕೆ ಅಳದಂಗಡಿ ಒತ್ತಾಯಿಸಿದರು. ಪ್ರಕರಣದ ತನಿಖೆ ನಡೆಯುತ್ತಿರುವ ಬಗ್ಗೆ ಮತ್ತು ಘಟನೆಯ ನಂತರ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಪುತ್ತೂರು ವಿವೇಕಾನಂದ ಆಶ್ರಮಕ್ಕೆ ಸೇರಿಸಲಾಗಿತ್ತು. ಇದೀಗ ಮಗುವಿನ ಅಜ್ಜ ನಾಗೇಶ್ ಅವರು ಕಾನೂನು ಪ್ರಕಾರ ಮಗುವನ್ನು ಪಡೆದುಕೊಂಡಿದ್ದಾರೆ ಎಂದು ಧರ್ಮಸ್ಥಳ ಪಿಎಸ್‌ಐ ಸಮರ್ಥ ಆರ್ ಗಾಣಿಗೇರ್ ಸಭೆಗೆ ತಿಳಿಸಿದರು.

ತಾಲೂಕಿನಲ್ಲಿ ಗಾಂಜಾ ಮಾದಕ ದ್ರವ್ಯಗಳ, ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಲಾ-ಕಾಲೇಜು ಪರಿಸರಕ್ಕೂ ಗಾಂಜಾ ವಾಸನೆ ಹರಡಿರುವುದು ಖಂಡನೀಯ.ಗಾಂಜಾ ಪೂರೈಕೆದಾರರನ್ನು ಪತ್ತೆ ಹಚ್ಚುವಂತೆ ಬಿ.ಕೆ ವಸಂತ ಆಗ್ರಹಿಸಿದರು.
ಲಾಯಿಲ ದರ್ಪಿಂಜೆ ಸೇತುವೆಯಲ್ಲಿ ಮದ್ಯಪಾನ ಮಾಡುತ್ತಾ ಮಜಾ ಮಾಡುವ ಗುಂಪು ಸಾರ್ವಜನಿಕರ ಶಾಂತಿಭಂಗಕ್ಕೆ ಕಾರಣವಾಗುವುದಲ್ಲದೆ, ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿರುವ ಕುರಿತು ಶೇಖರ ಲಾಯಿಲ ಸಭೆಯ ಗಮನಕ್ಕೆ ತಂದರು. ಅಂಥವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಲಾಯಿತು.

ಸಿ. ಕೆ.ಚಂದ್ರಕಲಾ ಮಾತನಾಡುತ್ತಾ ಯುವಜನರು ದುಷ್ಚಟಗಳಿಗೆ ಬಲಿಯಾಗಿ ದಾರಿ ತಪ್ಪುತ್ತಿದ್ದಾರೆ. ಉಜಿರೆಯಲ್ಲಿ ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಲು ಯತ್ನಿಸಿದ ಘಟನೆ ಅತ್ಯಂತ ಅಪಾಯಕಾರಿ. ಪೋಲಿಸ್ ಇಲಾಖೆ ದಲಿತ ಕಾಲನಿಗಳಿಗೆ ಭೇಟಿ ನೀಡಿ ಕಾನೂನು ಮಾಹಿತಿ ನೀಡಬೇಕು ಎಂದರು. ಮೊದಲಿಗೆ ಡಿವೈಎಸ್ಪಿ ಕಚೇರಿಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಸವಿತಾ ಶೆಟ್ಟಿ ಸ್ವಾಗತಿಸಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ ಐ ಸಮರ್ಥ್ ಆರ್ . ಗಾಣಿಗೇರ್ ವಂದಿಸಿದರು

Related posts

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya
error: Content is protected !!