July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

ವೇಣೂರು: ಪಡ್ಡoದಡ್ಕದ ಸಮೀಪದ ಕಟ್ಟೆಯಲ್ಲಿ ಎಸ್ ಕೆ ಎಸ್ ಎಸ್ ಎಫ್ ಶಾಖಾ ವತಿಯಿಂದ ಉಚಿತ ಮನೆಯನ್ನು ಹಸ್ತಾಂತರಿಸುವ ಕಾರ್ಯಕ್ರಮ ಶಾಖಾ ಚೇರ್ಮೆನ್ ಕೆಪಿ ಬಸೀರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮ ಮತ್ತು ಗೃಹ ಪ್ರವೇಶವನ್ನು ಉದ್ಯಮಿ ಹಾಗೂ ಮಸೀದಿ ಮಾಜಿ ಅಧ್ಯಕ್ಷ ಯುಕೆ ಮೊಹಮ್ಮದ್ ಹಾಜಿ ನೆರವೇರಿಸಿದರು. ಮಸೀದಿ ಖತೀಬ್ ಸಮೀರ್ ದಾರಿಮಿ ದುವಾ ನೆರವೇರಿಸಿದರು. ಮನೆಯ ಕೀ ಯನ್ನು ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪರಿಂಜೆ ಮುಸ್ತಾಪ ರವರಿಗೆ ಹಸ್ತಾಂತರಿಸಿದರು. ಪಡ್ಡoದಡ್ಕ ಎಸ್ ಕೆ ಎಸ್ ಎಸ್ ಫ್ ಶಾಖೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಬಡ ಆಸಕ್ತರಿಗೆ,ಮದುವೆ ಕಾರ್ಯಕ್ಕೆ, ಅನಾರೋಗ್ಯಕ್ಕೆ ತುತ್ತಾದಾಗ ಹಣ ಸಹಾಯ, ಮೃತರಾದಾಗ ಸ್ವಯಂ ಸೇವೆಯಿಂದ ದಪನ ಕಾರ್ಯದ ಸಂಪೂರ್ಣ ಜವಾಬ್ದಾರಿ ಇತ್ಯಾದಿ ಬಗ್ಗೆ ಸೇವೆ ಮಾಡುತ್ತಿದೆ.

ಈ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಕೋಶಾಧಿಕಾರಿ ಅಶ್ರಫ್ ಮರೋಡಿ, ಜಿಲ್ಲಾ ಉಪಾಧ್ಯಕ್ಷ ಅಜೀಜ್ ಮಲೀಕ್ ಮೂಡಬಿದ್ರಿ, ವಲಯ ಅಧ್ಯಕ್ಷ ರಜಾಕ್ ಮದನಿ, ಜಿಲ್ಲಾ ವಿಖಾಯ ಕನ್ವೀನರ್ ಪಾರೂಕ್ ವಿಶಾಲ್ ನಗರ ಮೂಡಬಿದ್ರಿ, ಪ್ರಮುಖರಾದ ಖಾಲಿದ್ ಪೂಲಬೆ,ರಫೀಕ್ ಪಡ್ಡ, ಸದರ್ ಅಬ್ದುಲ್ ರಹಿಮಾನ್ನ್ ಯಮಾನಿ, ಹಕೀಮ್ ಜಲಾಲಿ, ಎಸ್ ಕೆ ರಜಾಕ್, ಸ್ವರೂಪ್ ಕಟ್ಟೆ,ಇಕ್ಬಾಲ್ ಕುರ್ಲೊಟ್ಟು, ಹಕೀಂ ಗಾಂಧಿನಗರ, ಶಬ್ಬೀರ್ ಪಡ್ಡ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಮೊಹಮ್ಮದ್ ಶಾಫಿ ಕಿರೋಡಿ ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು.ವಿಖಾಯ ಚೇರ್ಮನ್ ಮನ್ಸೂರ್ ಮೂಡಬಿದ್ರಿ ವಂದಿಸಿದರು.

Related posts

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!