27.3 C
ಪುತ್ತೂರು, ಬೆಳ್ತಂಗಡಿ
April 27, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ರಾ.ಹೆ‌.ಯಲ್ಲಿ 2017 ರಲ್ಲಿ ಲಾರಿ ತಡೆದು ನಡೆಸಿದ ದರೋಡೆ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎರಡನೇ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ:65/2017 ಕಲಂ, 397, 395 ಜೊತೆಗೆ 34 ಐಪಿಸಿ (ರೆಖ್ಯಾ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ನಡೆಸಿದ) ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ A-2 ವಾರಂಟ್ ಆರೋಪಿ ಬೆಂಗಳೂರು ಬನಶಂಕರಿ ನಿವಾಸಿ ಮಣಿ @ ಮಣಿಕಂಠ (32) ಎಂಬಾತನನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ರವರುಗಳು ಬೆಂಗಳೂರಿನ ಬನಶಂಕರಿ ಮಾರ್ಕೆಟ್ ಬಳಿ ಎ.26 ರಂದು ಖಚಿತ ಮಾಹಿತಿ ಮೇರೆಗೆ ಬಂಧಿಸಿ ಎ.27 ರಂದು ಮಾನ್ಯ ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya
error: Content is protected !!