36.1 C
ಪುತ್ತೂರು, ಬೆಳ್ತಂಗಡಿ
April 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಎ.29ರಂದು ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.

ಈಗಾಗಲೆ 105 ಜೊತೆ ವಧು-ವರರು ವಿವಾಹಕ್ಕಾಗಿ ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು ಎಂದು ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸುತ್ತಿದ್ದು, ಕಳೆದ ವರ್ಷದ ವರೆಗೆ ಹದಿಮೂರು ಸಾವಿರ ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ದಾಂಪತ್ಯಜೀವನ ನಡೆಸುತ್ತಿದ್ದಾರೆ.

ಬುಧವಾರ ಸಂಜೆ ಗಂಟೆ ೬.೪೦ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಡಿ. ಹರ್ಷೇಂದ್ರ ಕುಮಾರ್ ನೇತೃತ್ವದಲ್ಲಿ ನಡೆಯುವ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಶಾಸಕ ಹರೀಶ್ ಪೂಂಜ ಮತ್ತು ಮೆಸ್ಕಾಂ ಅಧ್ಯಕ್ಷ ಹರೀಶ್‌ಕುಮಾರ್ ನೂತನ ದಂಪತಿಗಳಿಗೆ ಶುಭಾಶಂಸನೆ ಮಾಡುವರು.

Related posts

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya
error: Content is protected !!