July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್). ಹಾಗೂ ಶಿಕ್ಷಕರ ತರಬೇತಿ ಸಂಸ್ಥೆ (ಡಿ.ಎಡ್) ನಲ್ಲಿ ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮವು ಎ.24ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಮಾತನಾಡುತ್ತಾ “ಹಳೆಯ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮತ್ತು ಪ್ರಸ್ತುತ ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯದ ಜೊತೆಗೆ ಅನುಭವಗಳನ್ನು ಹಂಚಿಕೊಳ್ಳಲು ಸುಂದರವಾದ ವೇದಿಕೆ ” ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಿ.ಎಡ್. ಕಾಲೇಜಿನ ಹಳೆವಿದ್ಯಾರ್ಥಿ ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆ ಧರ್ಮಸ್ಥಳದ ಶಿಕ್ಷಕ ಜೋಸೆಫ್ ಟಿ.ಎಂ ಮಾತನಾಡಿ “ ಡಿ.ಎಡ್. ತರಬೇತಿಯು ಬದುಕಿನ ಪಾಠವನ್ನು ಕಲಿಸಿಕೊಟ್ಟಿದೆ. ಮಕ್ಕಳೊಂದಿಗೆ ಮಕ್ಕಳಾಗಿ ನಮ್ಮ ಜ್ಞಾನ ಸಂಪತ್ತನ್ನು ವಿದ್ಯಾರ್ಥಿಗಳಿಗೆ ನೀಡಿ ಸಮಾಜವನ್ನು, ದೇಶವನ್ನು ಸುಸ್ಥಿರ ಮಾಡುವಂತ ಶಿಕ್ಷಕರಾಗುವುದರೊಂದಿಗೆ ನ್ಯಾಯ, ನಿಷ್ಠೆ, ಕರುಣೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು” ಹೇಳಿದರು.

ಡಿ.ಎಡ್. ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪುಷ್ಪಾವತಿ ಕೆ ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆ ಉಜಿರೆಯ ಶಿಕ್ಷಕಿ ಮಾತನಾಡಿ “ನಮ್ಮ ಡಿ.ಎಡ್. ಕಾಲೇಜು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳೊಂದಿಗಿನ ಸಂಬಂಧ ಮತ್ತು ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಬದ್ಧತೆ ಹೇಗಿರಬೇಕೆಂಬುದನ್ನು ಕಲಿಸಿಕೊಟ್ಟಿದೆ ” ಎಂದು ಹೇಳುತ್ತಾ ತಾನು ಡಿ.ಎಡ್. ಮಾಡುವಾಗ ಪಡೆದ ಅನುಭವಗಳನ್ನು ಎಳೆ ಎಳೆಯಾಗಿ ಹಂಚಿಕೊಂಡರು.

ಬಿ.ಎಡ್. ಕಾಲೇಜಿನ ಹಳೆವಿದ್ಯಾರ್ಥಿನಿ ಶ್ರೀ ಧ.ಮಂ.ಪಿ.ಯು ಕಾಲೇಜು ಉಜಿರೆಯ ಉಪನ್ಯಾಸಕಿಯಾದ ಪ್ರತೀಕ್ಷಾ ಜೈನ್ ಮಾತನಾಡಿ “ ಹಳೆಯ ವಿದ್ಯಾರ್ಥಿಗಳ ನಾಯಕತ್ವ, ಸ್ವಯಂ ಪ್ರೇರಿತ ಬದ್ಧತೆ, ಸದ್ಭಾವನೆ ಚಿಂತನೆಗಳೆಲ್ಲವನ್ನೂ ಹಂಚಿಕೊಳ್ಳಲು ಹಾಗೂ ಮಾರ್ಗದರ್ಶನ ಮಾಡಲು ಹಳೆಯ ವಿದ್ಯಾರ್ಥಿಗಳ ಸಂಘವು ಸೂಕ್ತವಾದ ವೇದಿಕೆಯಾಗಿದೆ. ಬಿ.ಎಡ್. ತರಗತಿಗಳಲ್ಲಿ ಕಲಿತಂತಹ ಪಾಠಗಳು, ಪ್ರಯೋಗಗಳು ಮತ್ತು ಜೀವನ ಉತ್ಸಾಹ ಎಲ್ಲವೂ ಕೂಡ ಅವಿಸ್ಮರಣೀಯ ” ಎಂದು ಹೇಳುತ್ತಾ ತಮ್ಮ ಅನುಭವಗಳೊಂದಿಗೆ ಅನಾವರಣಗೊಳಿಸಿದರು.

ಬಿ.ಎಡ್. ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಧನುಷ್ ಕೆ ಪಿ ಮಾತನಾಡಿ “ ನನ್ನ ಬಿ.ಎಡ್. ವ್ಯಾಸಂಗವು ಸದಾ ನೂತನವಾದ ಅನುಭವವನ್ನೇ ನೀಡುತ್ತದೆ. ಅಲ್ಲಿ ನಾನು ಗಳಿಸಿಕೊಂಡ ವ್ಯಕ್ತಿತ್ವದ ಗುಣಗಳು ನನ್ನ ಜೀವನಕ್ಕೆ ಕೈಗನ್ನಡಿಯಾಗಿದೆ. ಯಾವುದೇ ಸಮಸ್ಯೆಯನ್ನು ಎದುರಿಸುವ ತಾಳ್ಮೆ ಹಾಗೂ ಚಿಂತನಾಶಕ್ತಿಯನ್ನು ನೀಡಿದೆ. ಹಾಗಾಗಿ ನಮಗೆ ದಾರಿದೀಪವಾದ ಎಲ್ಲಾ ಶಿಕ್ಷಕರನ್ನು ಸದಾ ನಾವು ಸ್ಮರಿಸಿಕೊಳ್ಳೋಣ ” ಎಂದು ಹೇಳಿದರು.

ಸಂಘದ ವತಿಯಿಂದ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕöÈತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ಡಿ.ಎಡ್. ಬಿ.ಎಡ್. ನ ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳೆಲ್ಲರೂ ಭಾಗವಹಿಸಿದ್ದರು.
ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸಾಯಿಧೃತಿ ಮತ್ತು ತಂಡ ಪ್ರಾರ್ಥಿಸಿ, ಪಲ್ಲವಿ ಸ್ವಾಗತಿಸಿ, ಪ್ರಜ್ಞ ವಂದಿಸಿ, ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya
error: Content is protected !!