27.3 C
ಪುತ್ತೂರು, ಬೆಳ್ತಂಗಡಿ
April 27, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ಅಪರಿಚಿತ ಸುಮಾರು 40 ರಿಂದ 45 ವರ್ಷದ ಗಂಡಸಿನ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ನೀರಿನ ಡ್ಯಾಂ ನ ನೀರಿನಲ್ಲಿ ಎ.27 ರಂದು ಬೆಳಗ್ಗೆ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತವ್ಯಕ್ತಿಯ ಎತ್ತರ 5.7 ಅಡಿ, ದಪ್ಪ ಶರೀರ, ಎಣ್ಣೆ ಕಪ್ಪು ಮೈಬಣ್ಣ, ಅಗಲ ಮುಖ, ಮುಖದಲ್ಲಿ ಕಪ್ಪು ಮಿಶ್ರಿತ ಬಿಳಿ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ಮಿಶ್ರಿತ ಕಪ್ಪು ಕೂದಲು ಇರುವುದು ಕಂಡು ಬರುತ್ತದೆ.ಮೃತದೇಹದ ಮೈಮೇಲೆ ಬಿಳಿ ಬಣ್ಣದಲ್ಲಿ ನೀಲಿ ಬಣ್ಣದ ಅಡ್ಡ ಹಾಗೂ ಉದ್ದ ಗೆರೆಗಳಿರುವ ತುಂಬು ತೋಳಿನ ಶರ್ಟ್‌-1, ಕಾಪಿ ಬಣ್ಣದ ಪ್ಯಾಂಟ್‌ ಧರಿಸಿರುತ್ತಾರೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500 ಗೆ ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ಧರ್ಮಸ್ಥಳ ಪೊಲೀಸರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya
error: Content is protected !!