28 C
ಪುತ್ತೂರು, ಬೆಳ್ತಂಗಡಿ
August 5, 2026
ಸಮಸ್ಯೆ

ಕೊಕ್ಕಡ: ಹಿಟ್ ಅಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ, ಆಂಬುಲೆನ್ಸ್ ವಿಳಂಬಕ್ಕೆ ಆಕ್ರೋಶ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ.

ಕೊಕ್ಕಡದಿಂದ ಉಪ್ಪಿನಂಗಡಿಗೆ ಗೋಳಿತೊಟ್ಟು ಮಾರ್ಗವಾಗಿ ತೆರಳುತ್ತಿದ್ದ ಕೊಕ್ಕಡ ಕೆನರಾ ಬ್ಯಾಂಕ್‌ನ ಚಿನ್ನ ಪರೀಕ್ಷಕ, ಬಲ್ಯ ನಿವಾಸಿ ಗಣೇಶ್ ಆಚಾರ್ಯ ಅವರು ಚಲಿಸುತ್ತಿದ್ದ ಬೈಕ್‌ಗೆ ಉಪ್ಪಾರಪಳಿಕೆ ಬಳಿ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತಕ್ಷಣವೇ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯಿಂದ ಗಣೇಶ್ ಆಚಾರ್ಯ ಅವರು ಗಾಯಗೊಂಡಿದ್ದು, ಸ್ಥಳದಲ್ಲಿದ್ದ ಸ್ಥಳೀಯರು ತಕ್ಷಣ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಇದೇ ವೇಳೆ ಗಾಯಾಳುವನ್ನು ತುರ್ತು ಚಿಕಿತ್ಸೆಗೆ ಕೊಂಡೊಯ್ಯಲು ನಿಯೋಜಿಸಲಾಗಿದ್ದ ಕೊಕ್ಕಡ ಸರಕಾರಿ ಆಸ್ಪತ್ರೆಯ 108 ಆಂಬುಲೆನ್ಸ್ ರಿಪೇರಿಗಾಗಿ ಕಳೆದ ಮೂರು ದಿನಗಳ ಹಿಂದೆ ಗ್ಯಾರೇಜ್‌ಗೆ ಕೊಂಡೊಯ್ಯಲಾಗಿದ್ದರಿಂದ, ಆಂಬುಲೆನ್ಸ್ ಲಭ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಯಿತು. ಇದರ ಪರಿಣಾಮವಾಗಿ ಗಾಯಾಳು ಸುಮಾರು ಅರ್ಧ ಗಂಟೆಗಿಂತ ಹೆಚ್ಚು ಸಮಯ ಆಸ್ಪತ್ರೆಯಲ್ಲಿ ಕಾಯುವಂತಾಗಿ, ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಯಿತು. ಕೆಲಕಾಲ ಆಸ್ಪತ್ರೆ ಎದುರು ಆಕ್ರೋಶವೂ ವ್ಯಕ್ತಗೊಂಡಿತು.
ನಂತರ ಶಿರಾಡಿಯಿಂದ 108 ಆಂಬುಲೆನ್ಸ್ ತರಿಸಿ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ತಿಳಿದು ಬಂದಿದೆ.

Related posts

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಹೆದ್ದಾರಿ ಬದಿಯಲ್ಲೇ ಬೆಳ್ತಂಗಡಿ ವಾರದ ಸಂತೆ: ಹೆಚ್ಚಿದ ಟ್ರಾಫಿಕ್ ಜಾಮ್-ಪ್ರತಿ ದಿನ ಸಂಕಷ್ಟಕ್ಕೆ ಸಿಲುಕಿದ ವಾಹನ ಚಾಲಕರು, ಪ್ರಯಾಣಿಕರ ಗೋಳು

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya
error: Content is protected !!