24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

ಗುರುವಾಯನಕೆರೆ: ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದ ವತಿಯಿಂದ ಯಕ್ಷಗಾನ ಬಣ್ಣಗಾರಿಕೆ ಕಲಿಕಾ ಶಿಬಿರವು ಗುರುವಾಯನಕೆರೆ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ಜರಗಿತು.

ಭಾಗವತ ದೇವಿಪ್ರಸಾದ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೇಯಸ್ ವಾಮದ ಪದವು ,ಕೇಶವ ಹಿಮ್ಮೇಳದಲ್ಲಿ ಚೌಕಿ ಪೂಜೆ ನಡೆದು ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆ ನಡೆಯಿತು. ಕೊಡಮಣಿತ್ತಾಯ ದೈವಸ್ಥಾನ ಅರಮಲೆ ಬೆಟ್ಟ ಅನುವಂಶಿಕ ಮೊಕ್ತೇಸರ ಸುಕೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಕಲಾ ಬಳಗದಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಕಲಾವಿದರಾಗಿ ರೂಪುಗೊಳ್ಳುವಂತಾಗಲು ಶಿಬಿರವು ಪ್ರೇರಣೆ ನೀಡಲಿ ಎಂದರು.

ಬೆಳ್ತಂಗಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಟ್ರಸ್ಟಿ, ಲಯನ್ ದೇವಿದಾಸ ಶೆಟ್ಟಿ ಬದ್ಯಾರು, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಪ್ರದೀಪ ಶೆಟ್ಟಿ ಶಕ್ತಿ ನಗರ,ಆನಂದ ಶೆಟ್ಟಿ ಶಕ್ತಿನಗರ ಶುಭ ಹಾರೈಸಿದರು.ಶ್ರೀ ಶಾರದಾಂಬ ಭಜನಾ ಮಂಡಳಿ ಅಧ್ಯಕ್ಷರಾದ ಕುಸುಮಾವತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಯಕ್ಷಗಾನ ಮತ್ತು ಬಣ್ಣಗಾರಿಕೆ ಎಂಬ ವಿಚಾರದಲ್ಲಿ ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ ಗೇರುಕಟ್ಟೆ ಉಪನ್ಯಾಸ ನೀಡಿ ಕಲಾವಿದನಾಗಲು ಯಕ್ಷಗಾನದ ಚತುರ್ವಿಧಗಳಾದ ಆಂಗಿಕ , ಸಾತ್ವಿಕ, ಆಹಾರ್ಯ ಮತ್ತು ವಾಚಿಕದಲ್ಲಿ ಪೂರ್ಣತೆಯನ್ನು ಸಾಧಿಸಬೇಕೆಂದರು. ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಾಣಿ ಪದವಿ ಪೂರ್ವ ಕಾಲೇಜು ಪಟ್ಲ ಪೌಂಡೇಶನ್ ಯಕ್ಷ ಶಿಕ್ಷಣದ ವಿದ್ಯಾರ್ಥಿಗಳಾದ ರಂಜಿತಾ ಮತ್ತು ಸಾನ್ವಿ ಅವರನ್ನು ಗೌರವಿಸಲಾಯಿತು.

ಕಲಾವಿದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆಯ ಶಿಬಿರವನ್ನು ನಿರ್ವಹಿಸಿದರು. ನಾಟ್ಯಗುರು ದೇವಿ ಪ್ರಸಾದ್ ಆಚಾರ್ಯ ಗುರುವಾಯನಕೆರೆ ಕಾರ್ಯಕ್ರಮ ನಿರೂಪಿಸಿ ಸುಧಾಮಣಿ ವಂದಿಸಿದರು. ಗೆಳೆಯರ ಬಳಗ (ರಿ ) ಗುರುವಾಯನಕೆರೆ,ಶ್ರೀ ಶಾರದಾಂಬ ಭಜನಾ ಮಂಡಳಿ ಗುರುವಾಯನಕೆರೆ ಶಿಬಿರಕ್ಕೆ ಸಹಕಾರ ನೀಡಿದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಸೆ.14-16: ಉಜಿರೆಯಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!