25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

ಗುರುವಾಯನಕೆರೆ: ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದ ವತಿಯಿಂದ ಯಕ್ಷಗಾನ ಬಣ್ಣಗಾರಿಕೆ ಕಲಿಕಾ ಶಿಬಿರವು ಗುರುವಾಯನಕೆರೆ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ಜರಗಿತು.

ಭಾಗವತ ದೇವಿಪ್ರಸಾದ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೇಯಸ್ ವಾಮದ ಪದವು ,ಕೇಶವ ಹಿಮ್ಮೇಳದಲ್ಲಿ ಚೌಕಿ ಪೂಜೆ ನಡೆದು ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆ ನಡೆಯಿತು. ಕೊಡಮಣಿತ್ತಾಯ ದೈವಸ್ಥಾನ ಅರಮಲೆ ಬೆಟ್ಟ ಅನುವಂಶಿಕ ಮೊಕ್ತೇಸರ ಸುಕೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಕಲಾ ಬಳಗದಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಕಲಾವಿದರಾಗಿ ರೂಪುಗೊಳ್ಳುವಂತಾಗಲು ಶಿಬಿರವು ಪ್ರೇರಣೆ ನೀಡಲಿ ಎಂದರು.

ಬೆಳ್ತಂಗಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಟ್ರಸ್ಟಿ, ಲಯನ್ ದೇವಿದಾಸ ಶೆಟ್ಟಿ ಬದ್ಯಾರು, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಪ್ರದೀಪ ಶೆಟ್ಟಿ ಶಕ್ತಿ ನಗರ,ಆನಂದ ಶೆಟ್ಟಿ ಶಕ್ತಿನಗರ ಶುಭ ಹಾರೈಸಿದರು.ಶ್ರೀ ಶಾರದಾಂಬ ಭಜನಾ ಮಂಡಳಿ ಅಧ್ಯಕ್ಷರಾದ ಕುಸುಮಾವತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಯಕ್ಷಗಾನ ಮತ್ತು ಬಣ್ಣಗಾರಿಕೆ ಎಂಬ ವಿಚಾರದಲ್ಲಿ ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ ಗೇರುಕಟ್ಟೆ ಉಪನ್ಯಾಸ ನೀಡಿ ಕಲಾವಿದನಾಗಲು ಯಕ್ಷಗಾನದ ಚತುರ್ವಿಧಗಳಾದ ಆಂಗಿಕ , ಸಾತ್ವಿಕ, ಆಹಾರ್ಯ ಮತ್ತು ವಾಚಿಕದಲ್ಲಿ ಪೂರ್ಣತೆಯನ್ನು ಸಾಧಿಸಬೇಕೆಂದರು. ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಾಣಿ ಪದವಿ ಪೂರ್ವ ಕಾಲೇಜು ಪಟ್ಲ ಪೌಂಡೇಶನ್ ಯಕ್ಷ ಶಿಕ್ಷಣದ ವಿದ್ಯಾರ್ಥಿಗಳಾದ ರಂಜಿತಾ ಮತ್ತು ಸಾನ್ವಿ ಅವರನ್ನು ಗೌರವಿಸಲಾಯಿತು.

ಕಲಾವಿದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆಯ ಶಿಬಿರವನ್ನು ನಿರ್ವಹಿಸಿದರು. ನಾಟ್ಯಗುರು ದೇವಿ ಪ್ರಸಾದ್ ಆಚಾರ್ಯ ಗುರುವಾಯನಕೆರೆ ಕಾರ್ಯಕ್ರಮ ನಿರೂಪಿಸಿ ಸುಧಾಮಣಿ ವಂದಿಸಿದರು. ಗೆಳೆಯರ ಬಳಗ (ರಿ ) ಗುರುವಾಯನಕೆರೆ,ಶ್ರೀ ಶಾರದಾಂಬ ಭಜನಾ ಮಂಡಳಿ ಗುರುವಾಯನಕೆರೆ ಶಿಬಿರಕ್ಕೆ ಸಹಕಾರ ನೀಡಿದರು.

Related posts

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya
error: Content is protected !!