24.8 C
ಪುತ್ತೂರು, ಬೆಳ್ತಂಗಡಿ
September 20, 2026
ಆಯ್ಕೆ

ಬಂಟರ ಯಾನೆ ನಾಡವರ ಸಂಘಕ್ಕೆ ಬೆಳ್ತಂಗಡಿಯಿಂದ 4 ಮಂದಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಬೆಳ್ತಂಗಡಿ ತಾಲೂಕಿನಿಂದ 4 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾತೃ ಸಂಘದ ಸಂಚಾಲಕರಾಗಿರುವ ಎಂ.ಜಯರಾಮ್ ಭಂಡಾರಿ ಧರ್ಮಸ್ಥಳ, ಸಹ ಸಂಚಾಲಕರಾಗಿರುವ ಕಿರಣ್ ಕುಮಾ‌ರ್ ಶೆಟ್ಟಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಮಹಿಳಾ ಕ್ಷೇತ್ರದಿಂದ ಮಾಡಬಿದಿರೆ ಮಹಾವೀರ ಕಾಲೇಜಿನ ಉಪನ್ಯಾಸಕಿಯಾದ ಸುಜಾತಾ ಶೆಟ್ಟಿ ಪೆರಿಂಜೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸರ್ಕಲ್ ಬಳಿ ಇರುವ ಬಂಟರ ಯಾನೆ ನಾಡವರ ಸಂಘ(ರಿ.), ಇದರ 2026-2029ನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳ ಚುನಾವಣೆಯನ್ನು ಘೋಷಿಸಲಾಗಿದ್ದು, ಮೇ 1 ರಿಂದ ಮೇ 7ರವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಅಧ್ಯಕ್ಷರಾಗಿ ಈಗಾಗಲೇ ಅಜಿತ್ ಕುಮಾರ್ ರೈ ಮಾಲಾಡಿಯವರು ಅವಿರೋಧವಾಗಿ ಆಯ್ಕೆ ಆಗಿದ್ದು, ಅಧಿಕೃತ ಘೋಷಣೆ ಆಗಬೇಕಾಗಿದೆ.

Related posts

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಮುಂಡಾಜೆ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya
error: Content is protected !!