35.6 C
ಪುತ್ತೂರು, ಬೆಳ್ತಂಗಡಿ
April 28, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

ಗುರುವಾಯನಕೆರೆ: ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದ ವತಿಯಿಂದ ಯಕ್ಷಗಾನ ಬಣ್ಣಗಾರಿಕೆ ಕಲಿಕಾ ಶಿಬಿರವು ಗುರುವಾಯನಕೆರೆ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ಜರಗಿತು.

ಭಾಗವತ ದೇವಿಪ್ರಸಾದ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೇಯಸ್ ವಾಮದ ಪದವು ,ಕೇಶವ ಹಿಮ್ಮೇಳದಲ್ಲಿ ಚೌಕಿ ಪೂಜೆ ನಡೆದು ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆ ನಡೆಯಿತು. ಕೊಡಮಣಿತ್ತಾಯ ದೈವಸ್ಥಾನ ಅರಮಲೆ ಬೆಟ್ಟ ಅನುವಂಶಿಕ ಮೊಕ್ತೇಸರ ಸುಕೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಕಲಾ ಬಳಗದಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಕಲಾವಿದರಾಗಿ ರೂಪುಗೊಳ್ಳುವಂತಾಗಲು ಶಿಬಿರವು ಪ್ರೇರಣೆ ನೀಡಲಿ ಎಂದರು.

ಬೆಳ್ತಂಗಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಟ್ರಸ್ಟಿ, ಲಯನ್ ದೇವಿದಾಸ ಶೆಟ್ಟಿ ಬದ್ಯಾರು, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಪ್ರದೀಪ ಶೆಟ್ಟಿ ಶಕ್ತಿ ನಗರ,ಆನಂದ ಶೆಟ್ಟಿ ಶಕ್ತಿನಗರ ಶುಭ ಹಾರೈಸಿದರು.ಶ್ರೀ ಶಾರದಾಂಬ ಭಜನಾ ಮಂಡಳಿ ಅಧ್ಯಕ್ಷರಾದ ಕುಸುಮಾವತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಯಕ್ಷಗಾನ ಮತ್ತು ಬಣ್ಣಗಾರಿಕೆ ಎಂಬ ವಿಚಾರದಲ್ಲಿ ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ ಗೇರುಕಟ್ಟೆ ಉಪನ್ಯಾಸ ನೀಡಿ ಕಲಾವಿದನಾಗಲು ಯಕ್ಷಗಾನದ ಚತುರ್ವಿಧಗಳಾದ ಆಂಗಿಕ , ಸಾತ್ವಿಕ, ಆಹಾರ್ಯ ಮತ್ತು ವಾಚಿಕದಲ್ಲಿ ಪೂರ್ಣತೆಯನ್ನು ಸಾಧಿಸಬೇಕೆಂದರು. ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಾಣಿ ಪದವಿ ಪೂರ್ವ ಕಾಲೇಜು ಪಟ್ಲ ಪೌಂಡೇಶನ್ ಯಕ್ಷ ಶಿಕ್ಷಣದ ವಿದ್ಯಾರ್ಥಿಗಳಾದ ರಂಜಿತಾ ಮತ್ತು ಸಾನ್ವಿ ಅವರನ್ನು ಗೌರವಿಸಲಾಯಿತು.

ಕಲಾವಿದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆಯ ಶಿಬಿರವನ್ನು ನಿರ್ವಹಿಸಿದರು. ನಾಟ್ಯಗುರು ದೇವಿ ಪ್ರಸಾದ್ ಆಚಾರ್ಯ ಗುರುವಾಯನಕೆರೆ ಕಾರ್ಯಕ್ರಮ ನಿರೂಪಿಸಿ ಸುಧಾಮಣಿ ವಂದಿಸಿದರು. ಗೆಳೆಯರ ಬಳಗ (ರಿ ) ಗುರುವಾಯನಕೆರೆ,ಶ್ರೀ ಶಾರದಾಂಬ ಭಜನಾ ಮಂಡಳಿ ಗುರುವಾಯನಕೆರೆ ಶಿಬಿರಕ್ಕೆ ಸಹಕಾರ ನೀಡಿದರು.

Related posts

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!