28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

ಗುರುವಾಯನಕೆರೆ: ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದ ವತಿಯಿಂದ ಯಕ್ಷಗಾನ ಬಣ್ಣಗಾರಿಕೆ ಕಲಿಕಾ ಶಿಬಿರವು ಗುರುವಾಯನಕೆರೆ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ಜರಗಿತು.

ಭಾಗವತ ದೇವಿಪ್ರಸಾದ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೇಯಸ್ ವಾಮದ ಪದವು ,ಕೇಶವ ಹಿಮ್ಮೇಳದಲ್ಲಿ ಚೌಕಿ ಪೂಜೆ ನಡೆದು ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆ ನಡೆಯಿತು. ಕೊಡಮಣಿತ್ತಾಯ ದೈವಸ್ಥಾನ ಅರಮಲೆ ಬೆಟ್ಟ ಅನುವಂಶಿಕ ಮೊಕ್ತೇಸರ ಸುಕೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಕಲಾ ಬಳಗದಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಕಲಾವಿದರಾಗಿ ರೂಪುಗೊಳ್ಳುವಂತಾಗಲು ಶಿಬಿರವು ಪ್ರೇರಣೆ ನೀಡಲಿ ಎಂದರು.

ಬೆಳ್ತಂಗಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಟ್ರಸ್ಟಿ, ಲಯನ್ ದೇವಿದಾಸ ಶೆಟ್ಟಿ ಬದ್ಯಾರು, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಪ್ರದೀಪ ಶೆಟ್ಟಿ ಶಕ್ತಿ ನಗರ,ಆನಂದ ಶೆಟ್ಟಿ ಶಕ್ತಿನಗರ ಶುಭ ಹಾರೈಸಿದರು.ಶ್ರೀ ಶಾರದಾಂಬ ಭಜನಾ ಮಂಡಳಿ ಅಧ್ಯಕ್ಷರಾದ ಕುಸುಮಾವತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಯಕ್ಷಗಾನ ಮತ್ತು ಬಣ್ಣಗಾರಿಕೆ ಎಂಬ ವಿಚಾರದಲ್ಲಿ ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ ಗೇರುಕಟ್ಟೆ ಉಪನ್ಯಾಸ ನೀಡಿ ಕಲಾವಿದನಾಗಲು ಯಕ್ಷಗಾನದ ಚತುರ್ವಿಧಗಳಾದ ಆಂಗಿಕ , ಸಾತ್ವಿಕ, ಆಹಾರ್ಯ ಮತ್ತು ವಾಚಿಕದಲ್ಲಿ ಪೂರ್ಣತೆಯನ್ನು ಸಾಧಿಸಬೇಕೆಂದರು. ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಾಣಿ ಪದವಿ ಪೂರ್ವ ಕಾಲೇಜು ಪಟ್ಲ ಪೌಂಡೇಶನ್ ಯಕ್ಷ ಶಿಕ್ಷಣದ ವಿದ್ಯಾರ್ಥಿಗಳಾದ ರಂಜಿತಾ ಮತ್ತು ಸಾನ್ವಿ ಅವರನ್ನು ಗೌರವಿಸಲಾಯಿತು.

ಕಲಾವಿದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆಯ ಶಿಬಿರವನ್ನು ನಿರ್ವಹಿಸಿದರು. ನಾಟ್ಯಗುರು ದೇವಿ ಪ್ರಸಾದ್ ಆಚಾರ್ಯ ಗುರುವಾಯನಕೆರೆ ಕಾರ್ಯಕ್ರಮ ನಿರೂಪಿಸಿ ಸುಧಾಮಣಿ ವಂದಿಸಿದರು. ಗೆಳೆಯರ ಬಳಗ (ರಿ ) ಗುರುವಾಯನಕೆರೆ,ಶ್ರೀ ಶಾರದಾಂಬ ಭಜನಾ ಮಂಡಳಿ ಗುರುವಾಯನಕೆರೆ ಶಿಬಿರಕ್ಕೆ ಸಹಕಾರ ನೀಡಿದರು.

Related posts

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya
error: Content is protected !!