April 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

ಮರೋಡಿ: ಮರೋಡಿ ಪೊಸರಡ್ಕ ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ಗರಡಿಯಲ್ಲಿ ಎ.28ರಿಂದ ಮೇ 1ರವರೆಗೆ ನಡೆಯಲಿರುವ ಪುನ‌ರ್ ಪ್ರತಿಷ್ಠಾ ಬ್ರಹ್ಮಕುಂಭಾಭಿಷೇಕದ ಹಿನ್ನೆಲೆಯಲ್ಲಿ ಏ.28 ರಂದು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ ಮೂಲಕ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರು ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು,ಗೌರವ ಅಧ್ಯಕ್ಷರಾದ ರಾಜೇಂದ್ರ ಬಳ್ಳಾಳ್,ಹೇಮರಾಜ್ ಕೆ,ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್,ಕಾರ್ಯಾಧ್ಯಕ್ಷರಾದ ಎಂ.ಎಸ್ ಪೂಜಾರಿ,ನಾರಾಯಣ ಪೂಜಾರಿ,ಶೀತಲ್ ಜೈನ್,ಆಡಳಿತ ಸಮಿತಿ ಪ್ರ ಕಾರ್ಯದರ್ಶಿ ಆದಿತ್ಯ ಪಿ.ಕೆ ಹಾಗೂ ಸಮಿತಿ ಸದಸ್ಯರಾದ ರವೀಂದ್ರ ಪೂಜಾರಿ ನಾಪ,ರಮೇಶ್ ಬಲಂತ್ಯರೊಟ್ಟು, ಜಿನೇಂದ್ರ ಜೈನ್ ಹರಂಬೆಟ್ಟು ಗುತ್ತು,ಸುದರ್ಶನ್ ಜೈನ್ ಪಾಂಡಿಬೆಟ್ಟು ಗುತ್ತು,ಪ್ರಮುಖರಾದ ಶುಭರಾಜ್ ಹೆಗ್ಡೆ,ಯಶೋಧರ ಬಂಗೇರ ಮತ್ತು ಊರ ಪ್ರಮುಖರು,ಭಕ್ತರು,ಊರವರು ಉಪಸ್ಥಿತರಿದ್ದರು.

ವಿವಿಧ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಹೊತ್ತೊಯ್ದ ವಾಹನಗಳು ಮರೋಡಿ ದೇವಸ್ಥಾನದಿಂದ ಹೊರಟು ಸಾವಿರಾರು ಭಕ್ತರ ಸಮ್ಮುಖದಲ್ಲಿ ಚೆಂಡೆ, ಕುಣಿತ ಭಜನೆ, ಬ್ಯಾಂಡ್ ವಾದಕಗಳ ಮೂಲಕ ಶ್ರೀ ಕ್ಷೇತ್ರಕ್ಕೆ ಸಾಗಿಬಂತು.

Related posts

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya
error: Content is protected !!