ಬೆಳ್ತಂಗಡಿ: ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಬೆಳ್ತಂಗಡಿ ತಾಲೂಕಿನಿಂದ 4 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಾತೃ ಸಂಘದ ಸಂಚಾಲಕರಾಗಿರುವ ಎಂ.ಜಯರಾಮ್ ಭಂಡಾರಿ ಧರ್ಮಸ್ಥಳ, ಸಹ ಸಂಚಾಲಕರಾಗಿರುವ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಮಹಿಳಾ ಕ್ಷೇತ್ರದಿಂದ ಮಾಡಬಿದಿರೆ ಮಹಾವೀರ ಕಾಲೇಜಿನ ಉಪನ್ಯಾಸಕಿಯಾದ ಸುಜಾತಾ ಶೆಟ್ಟಿ ಪೆರಿಂಜೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸರ್ಕಲ್ ಬಳಿ ಇರುವ ಬಂಟರ ಯಾನೆ ನಾಡವರ ಸಂಘ(ರಿ.), ಇದರ 2026-2029ನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳ ಚುನಾವಣೆಯನ್ನು ಘೋಷಿಸಲಾಗಿದ್ದು, ಮೇ 1 ರಿಂದ ಮೇ 7ರವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಅಧ್ಯಕ್ಷರಾಗಿ ಈಗಾಗಲೇ ಅಜಿತ್ ಕುಮಾರ್ ರೈ ಮಾಲಾಡಿಯವರು ಅವಿರೋಧವಾಗಿ ಆಯ್ಕೆ ಆಗಿದ್ದು, ಅಧಿಕೃತ ಘೋಷಣೆ ಆಗಬೇಕಾಗಿದೆ.













