31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

ಧರ್ಮಸ್ಥಳ : ಫೇಸ್ಬುಕ್ ಮುಖಪುಟದ ಹೆಸರಾಂತ ಸಾಹಿತ್ಯ ಬಳಗಗಳಲ್ಲಿ ಒಂದಾದ ಯುಗಾದಿ ಬಳಗದ ಸ್ನೇಹ ಪರ್ವ -2 ಕಾರ್ಯಕ್ರಮ ಎ.26ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ಭುಜಬಲಿ ಧರ್ಮಸ್ಥಳ ವಹಿಸಿದ್ದರು. ಉದ್ಘಾಟನೆಯನ್ನು ಯುಗಾದಿ ಬಳಗದ ವ್ಯವಸ್ಥಾಪಕರು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಕೊಪ್ಪದ ಶಶಿಧರ್ ಎಲ್ಎಸ್ ಕೊಪ್ಪ, ತೀರ್ಥಹಳ್ಳಿಯ ಸತ್ಯಶೋಧ ಪತ್ರಿಕೆ ಸಂಪಾದಕ ಅರುಣ್ ಮಂಜುನಾಥ್, ಬೆಂಗಳೂರಿನ ಮಂಜುಳಾ ಪ್ರಸಾದ್ ಹಾಗೂ ರಾಜೇಶ್ವರಿ ಉಮೇಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯುಗಾದಿ ಬಳಗದ ಹಿರಿಯರಿಗೆ ಯುಗಾದಿ ಮಾಣಿಕ್ಯ ಹಾಗೂ ಸಕ್ರಿಯ ಸದಸ್ಯರಿಗೆ ಯುಗಾದಿ ಐಸಿರಿ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಸದಸ್ಯರಿಗೆ ಯುಗಾದಿ ಸುಜ್ಞಾನ ಸಿರಿ ಮತ್ತು ಪ್ರತಿಭಾ ಸಿರಿ ಗೌರವವನ್ನು ನೀಡಲಾಯಿತು.

ಯಲ್ಲಾಪುರದ ಶೈಲಾ ಭಟ್ ಸ್ವಾಗತಿಸಿ, ಹೊನ್ನಾವರದ ಶ್ರೀನಾಥ್ ಪಿ. ಎಸ್ ಪ್ರಸ್ತಾವಿಸಿದರು. ಬೆಂಗಳೂರಿನ ಶೀಲತಾ ಭಾರ್ಗವ್ ಮತ್ತು ಉಜಿರೆಯ ಆಶಾ ಅಡೂರ್ ಕಾರ್ಯಕ್ರಮ ನಿರೂಪಿಸಿದರು. ಬೆಂಗಳೂರಿನ ಸುಜಾತ ಭಟ್ ವಂದಿಸಿದರು. ಅಕ್ಷತಾ ಅಡೂರ್ ಪ್ರಾರ್ಥನೆ ಹಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗದ ಸದಸ್ಯರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿಯ ವೀಣಾ ಉಮೇಶ್, ಆಮಂತ್ರಣದ ವಿಜಯಕುಮಾರ್ ಜೈನ್ ಹಾಗೂ ಅರುಣ್ ಜೈನ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ವಿವಿಧ ಕಡೆಯಿಂದ ಯುಗಾದಿ ಬಳಗದ ಸದಸ್ಯರು ಆಗಮಿಸಿ ಸ್ನೇಹ ಪರ್ವ -2 ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya
error: Content is protected !!