April 28, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

ಗುರುವಾಯನಕೆರೆ: ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದ ವತಿಯಿಂದ ಯಕ್ಷಗಾನ ಬಣ್ಣಗಾರಿಕೆ ಕಲಿಕಾ ಶಿಬಿರವು ಗುರುವಾಯನಕೆರೆ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ಜರಗಿತು.

ಭಾಗವತ ದೇವಿಪ್ರಸಾದ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೇಯಸ್ ವಾಮದ ಪದವು ,ಕೇಶವ ಹಿಮ್ಮೇಳದಲ್ಲಿ ಚೌಕಿ ಪೂಜೆ ನಡೆದು ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆ ನಡೆಯಿತು. ಕೊಡಮಣಿತ್ತಾಯ ದೈವಸ್ಥಾನ ಅರಮಲೆ ಬೆಟ್ಟ ಅನುವಂಶಿಕ ಮೊಕ್ತೇಸರ ಸುಕೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಕಲಾ ಬಳಗದಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಕಲಾವಿದರಾಗಿ ರೂಪುಗೊಳ್ಳುವಂತಾಗಲು ಶಿಬಿರವು ಪ್ರೇರಣೆ ನೀಡಲಿ ಎಂದರು.

ಬೆಳ್ತಂಗಡಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಟ್ರಸ್ಟಿ, ಲಯನ್ ದೇವಿದಾಸ ಶೆಟ್ಟಿ ಬದ್ಯಾರು, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಪ್ರದೀಪ ಶೆಟ್ಟಿ ಶಕ್ತಿ ನಗರ,ಆನಂದ ಶೆಟ್ಟಿ ಶಕ್ತಿನಗರ ಶುಭ ಹಾರೈಸಿದರು.ಶ್ರೀ ಶಾರದಾಂಬ ಭಜನಾ ಮಂಡಳಿ ಅಧ್ಯಕ್ಷರಾದ ಕುಸುಮಾವತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಯಕ್ಷಗಾನ ಮತ್ತು ಬಣ್ಣಗಾರಿಕೆ ಎಂಬ ವಿಚಾರದಲ್ಲಿ ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ ಗೇರುಕಟ್ಟೆ ಉಪನ್ಯಾಸ ನೀಡಿ ಕಲಾವಿದನಾಗಲು ಯಕ್ಷಗಾನದ ಚತುರ್ವಿಧಗಳಾದ ಆಂಗಿಕ , ಸಾತ್ವಿಕ, ಆಹಾರ್ಯ ಮತ್ತು ವಾಚಿಕದಲ್ಲಿ ಪೂರ್ಣತೆಯನ್ನು ಸಾಧಿಸಬೇಕೆಂದರು. ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಾಣಿ ಪದವಿ ಪೂರ್ವ ಕಾಲೇಜು ಪಟ್ಲ ಪೌಂಡೇಶನ್ ಯಕ್ಷ ಶಿಕ್ಷಣದ ವಿದ್ಯಾರ್ಥಿಗಳಾದ ರಂಜಿತಾ ಮತ್ತು ಸಾನ್ವಿ ಅವರನ್ನು ಗೌರವಿಸಲಾಯಿತು.

ಕಲಾವಿದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು ವಿದ್ಯಾರ್ಥಿಗಳಿಗೆ ಬಣ್ಣಗಾರಿಕೆಯ ಶಿಬಿರವನ್ನು ನಿರ್ವಹಿಸಿದರು. ನಾಟ್ಯಗುರು ದೇವಿ ಪ್ರಸಾದ್ ಆಚಾರ್ಯ ಗುರುವಾಯನಕೆರೆ ಕಾರ್ಯಕ್ರಮ ನಿರೂಪಿಸಿ ಸುಧಾಮಣಿ ವಂದಿಸಿದರು. ಗೆಳೆಯರ ಬಳಗ (ರಿ ) ಗುರುವಾಯನಕೆರೆ,ಶ್ರೀ ಶಾರದಾಂಬ ಭಜನಾ ಮಂಡಳಿ ಗುರುವಾಯನಕೆರೆ ಶಿಬಿರಕ್ಕೆ ಸಹಕಾರ ನೀಡಿದರು.

Related posts

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya
error: Content is protected !!