August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ೨೦೨೬ರ ಏಪ್ರಿಲ್ ೨೯ ರಂದು ಬುಧವಾರ ಸಂಜೆ ಗಂಟೆ ೬.೪೦ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ಎಸ್.ಡಿ.ಯಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀನಿವಾಸ ರಾವ್, ರಜಪೂತ, ವಿಕಾಸ್ ಆರಿಗ, ಧರ್ಣಪ್ಪ ಮಾಸ್ಟರ್, ಶ್ರೀಮತಿ ರತ್ನಾವತಿ, ಮೋಹನ್ ಶೆಟ್ಟಿ, ಸಂತೋಷ್ ಹಾಗೂ ಶ್ರೀಮತಿ ಪವಿತ್ರ ಸುನಿಲ್ ಮೊದಲಾದವರು ಉಪಸ್ಥಿತರಿದ್ದರು. ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ನಿರ್ವಹಿಸಲಿದ್ದು, ಈ ವರ್ಷ 108 ಜೊತೆ ವಿವಾಹ ನಡೆಯಲಿದೆ.  

Related posts

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!