24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಬೆಳ್ತಂಗಡಿ:ಚಿಕ್ಕಮಗಳೂರು-ದಕ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಎ.29ರಂದು ಒಂಟಿ ಸಲಗ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಘಾಟಿ ತಿರುವಿನ ಎತ್ತರದ ಪ್ರದೇಶದಲ್ಲಿ ನಿಂತಿದ್ದ ಕಾಡಾನೆ ರಸ್ತೆ ಕಡೆ ಇಳಿಯಲು ಜಾಗ ಹುಡುಕುತ್ತಿದ್ದು,ಕೆಳಗಿಳಿಯಲು ಹೆದರಿ ಕೆಲಕಾಲ ಅಲ್ಲೇ ನಿಂತಿತ್ತು. ಮೇಲ್ಭಾಗದಿಂದ ಬೀಳುವ ಭೀತಿಯಿಂದ ಸುರಕ್ಷಿತ ದಾರಿ ಹುಡುಕುತ್ತಿದ್ದ ಸಲಗವನ್ನು ಕಂಡು ವಾಹನ ಸವಾರರು ಭಯಗೊಂಡು ತಮ್ಮ ವಾಹನಗಳನ್ನು ನಿಲ್ಲಿಸಿದರು.

ಘಟನಾ ಸ್ಥಳದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಅರಣ್ಯ ಇಲಾಖೆ ಅಥವಾ ಸಂಬಂಧಪಟ್ಟವರಿಗೆ ಮಾಹಿತಿ ನೀಡಲು ಪ್ರವಾಸಿಗರು ಪರದಾಡಿದರು. ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಹೆಚ್ಚು ಜಾಗ್ರತೆ ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

Related posts

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ – ಸಾಧಕರಿಗೆ-ನಿವೃತ್ತರಿಗೆ ಸನ್ಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ – ಪದಗ್ರಹಣ ಸಮಾರಂಭ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!