24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

ಬೆಳ್ತAಗಡಿ: ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಮತ್ತೊಂದು ಮಹತ್ವದ ಸಾಧನೆ ಲಭಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶದಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ಜೆ. ಪಿ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್ ಗಳಿಸಿದ್ದಾರೆ. ಅವರು ಒಟ್ಟು 593 ಅಂಕಗಳನ್ನು ಪಡೆದು ಈ ಸಾಧನೆ ಮಾಡಿದ್ದಾರೆ.

ವೀಕ್ಷಾ ಜೆ. ಪಿ ಅವರಿಗೆ ಮೊದಲು ನಡೆದ ಮೌಲ್ಯಮಾಪನದಲ್ಲಿ ಬಿಸಿನೆಸ್ ಸ್ಟಡೀಸ್ ವಿಷಯದಲ್ಲಿ 91 ಅಂಕಗಳು ಲಭಿಸಿದ್ದವು. ನಂತರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ೯ ಅಂಕಗಳ ಹೆಚ್ಚಳವಾಗಿದ್ದು, ಆ ವಿಷಯದಲ್ಲಿ 100 ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಸಾಧನೆಯ ಮೂಲಕ ವಾಣಿ ಪದವಿಪೂರ್ವ ಕಾಲೇಜು ಮತ್ತೊಮ್ಮೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಮೆರುಗು ತೋರಿಸಿದ್ದು, ವಿದ್ಯಾರ್ಥಿನಿಯ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದ ಫಲವಾಗಿ ಈ ಯಶಸ್ಸು ಸಾಧ್ಯವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಸಂತೋಷ ವ್ಯಕ್ತಪಡಿಸಿದೆ.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವಿವಿಧ ಸರಕಾರಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳ ವಿತರಣೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!