41.2 C
ಪುತ್ತೂರು, ಬೆಳ್ತಂಗಡಿ
April 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

ಬೆಳ್ತAಗಡಿ: ಕೊಯ್ಯೂರು ಗ್ರಾಮದಲ್ಲಿ ಅರಣ್ಯ ಇಲಾಖೆ ತಮ್ಮ ಜಮೀನು ಗುರುತಿಸುವ ನಿಟ್ಟಿನಲ್ಲಿ ಮಲೆಕುಡಿಯ ಸಮುದಾಯದವರು ಕೃಷಿ ಮಾಡಿಕೊಂಡು ಬಂದಿದ್ದ ಕೃಷಿಭೂಮಿಯೊಳಗೆ ಕಲ್ಲಿನ ಗುಪ್ಪೆ ಹಾಕುವ ಕಾರ್ಯ ಮಾಡಿದ್ದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಕೊಯ್ಯೂರು ಗ್ರಾಮದ ದುಗಲಾಯಿಬೆಟ್ಟು, ಕುಲ್ಲಾಜೆ ಈ ಪ್ರದೇಶದಲ್ಲಿ ಸುಮಾರು 80 ವರ್ಷ ಹಿಂದಿನಿಂದಲೂ ಮಲೆಕುಡಿಯ ಸಮುದಾಯದ ಜನರು ಬದುಕನ್ನು ನಡೆಸುತ್ತಾ ಬಂದಿದ್ದು, ಇಲ್ಲಿನ ನಿವಾಸಿಗಳಾದ ನಿರಂಜನ ಮಲೆಕುಡಿಯ, ಕೃಷ್ಣಪ್ಪ ಮಲೆಕುಡಿಯ, ನೋಣಯ್ಯ ಮಲೆಕುಡಿಯ, ಧರ್ಮರಾಜ್ ಮಲೆಕುಡಿಯ ಅವರ ಕೃಷಿ ಭೂಮಿಯ ನಡುವೆ ಅರಣ್ಯ ಇಲಾಖೆ ತಮ್ಮ ಗಡಿ ಗುಪ್ಪೆಗಳನ್ನು ನಿರ್ಮಿಸಿದೆ. ಸರ್ವೆ ನಂಬರ್ 60 ರಲ್ಲಿ ಇವರಿಗೆ ಸರಕಾರದಿಂದ ಹಕ್ಕುಪತ್ರವನ್ನೂ ನೀಡಲಾಗಿದೆ ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲೆಗಳು ಇವರ ಬಳಿ ಇದೆ.

ಆದರೆ ಕೃಷಿಕರಿಗೆ ಯಾವುದೇ ಮಾಹಿತಿ ನೀಡದೆ ಜಂಟಿ ಸರ್ವೆ ಮಾಡದೆ ಏಕಾಏಕಿ ಅರಣ್ಯ ಇಲಾಖೆ ಕೃಷಿಭೂಮಿಗೆ ಪ್ರವೇಶಿಸಿ ಗುಪ್ಪೆ ನಿರ್ಮಿಸುವ ಕಾರ್ಯ ಮಾಡಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಇದಲ್ಲದೆ ಇದರ ಸಮೀಪವಿರುವ ಮ್ಯಾಥ್ಯೂ ಹಾಗೂ ಸಿಬಿ ಎಂಬವರ ಜಾಗದಲ್ಲಿಯು ಇಲಾಖೆ ಗುಪ್ಪೆ ನಿರ್ಮಿಸಿದ್ದು, ಸರ್ವೆ ಮಾಡದೆ ನೋಟೀಸ್ ನೀಡದೆ ಯಾವ ಆಧಾರದ ಮೇಲೆ ಕೃಷಿ ಭೂಮಿಯಲ್ಲಿ ಗುಪ್ಪೆ ನಿರ್ಮಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಈಗಾಗಲೇ ಕಂದಾಯ, ಅರಣ್ಯ ಜಮೀನಿನ ನಡುವೆ ಬಾರಿ ಗೊಂದಲವಿದೆ. ಈ ಜಮೀನಿನ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪ್ರಕಟಿಸಿದೆ. ಇದರ ನಡುವಯೇ ಅರಣ್ಯ ಇಲಾಖೆಯು ಗುಪ್ಪೆ ನಿರ್ಮಿಸುತ್ತಿರುವುದು ಜನರನ್ನು ಮತ್ತಷ್ಟು ಚಿಂತೆಗೀಡುಮಾಡಿದೆ.

Related posts

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya
error: Content is protected !!