28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

ಬೆಳ್ತAಗಡಿ: ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಮತ್ತೊಂದು ಮಹತ್ವದ ಸಾಧನೆ ಲಭಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶದಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ಜೆ. ಪಿ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್ ಗಳಿಸಿದ್ದಾರೆ. ಅವರು ಒಟ್ಟು 593 ಅಂಕಗಳನ್ನು ಪಡೆದು ಈ ಸಾಧನೆ ಮಾಡಿದ್ದಾರೆ.

ವೀಕ್ಷಾ ಜೆ. ಪಿ ಅವರಿಗೆ ಮೊದಲು ನಡೆದ ಮೌಲ್ಯಮಾಪನದಲ್ಲಿ ಬಿಸಿನೆಸ್ ಸ್ಟಡೀಸ್ ವಿಷಯದಲ್ಲಿ 91 ಅಂಕಗಳು ಲಭಿಸಿದ್ದವು. ನಂತರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ೯ ಅಂಕಗಳ ಹೆಚ್ಚಳವಾಗಿದ್ದು, ಆ ವಿಷಯದಲ್ಲಿ 100 ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಸಾಧನೆಯ ಮೂಲಕ ವಾಣಿ ಪದವಿಪೂರ್ವ ಕಾಲೇಜು ಮತ್ತೊಮ್ಮೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಮೆರುಗು ತೋರಿಸಿದ್ದು, ವಿದ್ಯಾರ್ಥಿನಿಯ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದ ಫಲವಾಗಿ ಈ ಯಶಸ್ಸು ಸಾಧ್ಯವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಸಂತೋಷ ವ್ಯಕ್ತಪಡಿಸಿದೆ.

Related posts

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!