ಕಳಿಯ: ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ಹೆದ್ದಾರಿ ಗೇರುಕಟ್ಟೆ ಸಮೀಪದ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ರುಕ್ಮಯ ಗೌಡ (53ವ) ಅವರಿಗೆ ಅತೀ ವೇಗವಾಗಿ ಚಲಿಸುತ್ತಿದ್ದ ಅಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಎ.29 ರಾತ್ರಿ ನಡೆಯಿತು.
ಅತೀ ವೇಗವಾಗಿ ಚಲಾಯಿಸಿ ಕೊಂಡು ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಕಾಲು,ತಲೆ,ಮುಖಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ಸ್ಥಳೀಯರು ತಕ್ಷಣ ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿ ಮಂಗಳೂರು ಆಸ್ಪತ್ರೆಗೆ ಸೇರಿಸಲಾಯಿತು.
ಘಟನೆ ವಿವರ: ಉಪ್ಪಿನಂಗಡಿ ಕಡೆಯಿಂದ ಬಳೆಂಜ ಕಾಫಿನಡ್ಕ ಸಮೀಪದ ನಿವಾಸಿಗಳು ಮೂರು ಕಾರುಗಳು ಒಂದರ ಹಿಂದೆ ಒಂದರಂತೆ ಹಿಂದಿಕ್ಕಿಲು ಭರಾಟೆ ಯಲ್ಲಿ ಬರುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆಯಿತು ಎಂದು ಸ್ಥಳೀಯರು ಹೇಳುತ್ತಾರೆ. ಬೆಳ್ತಂಗಡಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ತನಿಖೆ ನಡೆಯುತ್ತಿದೆ.













