August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಏ.30ರಂದು ರಾತ್ರಿ ವೇಳೆ ಘಾಟಿ ರಸ್ತೆಯಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ವಲ್ಪ ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದವು.

ಏ.30ರಂದು ರಾತ್ರಿ ವೇಳೆ ಚಾರ್ಮಾಡಿ ಘಾಟಿ ರಸ್ತೆಯ ಆರನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿತ್ತು. ಇದನ್ನು ಗಮನಿಸಿದ ವಾಹನ ಸವಾರರು ಇತರ ವಾಹನಗಳಿಗೆ ನಿಲ್ಲುವಂತೆ ಸೂಚನೆ ನೀಡಿದ್ದರು. ಘಾಟಿ ರಸ್ತೆಯಲ್ಲಿ ಮೊಬೈಲ್ ನೆಟ್ವರ್ಕ್ ಸಿಗದ ಹಿನ್ನೆಲೆಯಲ್ಲಿ ವಾಹನ ಸವಾರರು ಚೆಕ್ ಪೋಸ್ಟ್‌ನಲ್ಲಿ ಆನೆ ಸಂಚರಿಸುತ್ತಿರುವ ವಿಷಯ ತಿಳಿಸಿದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಬಂದು, ಯಾರೂ ತೆರಳದಂತೆ ಸೂಚನೆ ನೀಡಿದರು. ಕಾಡಾನೆ ಆರನೇ ತಿರುವಿನಿಂದ ಒಂಬತ್ತನೇ ತಿರುವಿನತ್ತ ಹೋಗಿ ಬಳಿಕ ಬಾಂಜಾರು ಕಾಡಿನತ್ತ ತೆರಳಿದೆ ಎಂದು ಅರಣ್ಯ ಇಲಾಖೆ ಸಿಬಂದಿ ಮಾಹಿತಿ ನೀಡಿದ್ದಾರೆ. ಇದೇ ಒಂಟಿ ಕಾಡಾನೆ ಬುಧವಾರವೂ ಚಾರ್ಮಾಡಿ ಘಾಟರಸ್ತೆಯಲ್ಲಿ ತಿರುಗಾಡುತ್ತಿತ್ತು ಎಂದು ಜನರು ತಿಳಿಸಿದ್ದಾರೆ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya
error: Content is protected !!