28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಏ.30ರಂದು ರಾತ್ರಿ ವೇಳೆ ಘಾಟಿ ರಸ್ತೆಯಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ವಲ್ಪ ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದವು.

ಏ.30ರಂದು ರಾತ್ರಿ ವೇಳೆ ಚಾರ್ಮಾಡಿ ಘಾಟಿ ರಸ್ತೆಯ ಆರನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿತ್ತು. ಇದನ್ನು ಗಮನಿಸಿದ ವಾಹನ ಸವಾರರು ಇತರ ವಾಹನಗಳಿಗೆ ನಿಲ್ಲುವಂತೆ ಸೂಚನೆ ನೀಡಿದ್ದರು. ಘಾಟಿ ರಸ್ತೆಯಲ್ಲಿ ಮೊಬೈಲ್ ನೆಟ್ವರ್ಕ್ ಸಿಗದ ಹಿನ್ನೆಲೆಯಲ್ಲಿ ವಾಹನ ಸವಾರರು ಚೆಕ್ ಪೋಸ್ಟ್‌ನಲ್ಲಿ ಆನೆ ಸಂಚರಿಸುತ್ತಿರುವ ವಿಷಯ ತಿಳಿಸಿದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಬಂದು, ಯಾರೂ ತೆರಳದಂತೆ ಸೂಚನೆ ನೀಡಿದರು. ಕಾಡಾನೆ ಆರನೇ ತಿರುವಿನಿಂದ ಒಂಬತ್ತನೇ ತಿರುವಿನತ್ತ ಹೋಗಿ ಬಳಿಕ ಬಾಂಜಾರು ಕಾಡಿನತ್ತ ತೆರಳಿದೆ ಎಂದು ಅರಣ್ಯ ಇಲಾಖೆ ಸಿಬಂದಿ ಮಾಹಿತಿ ನೀಡಿದ್ದಾರೆ. ಇದೇ ಒಂಟಿ ಕಾಡಾನೆ ಬುಧವಾರವೂ ಚಾರ್ಮಾಡಿ ಘಾಟರಸ್ತೆಯಲ್ಲಿ ತಿರುಗಾಡುತ್ತಿತ್ತು ಎಂದು ಜನರು ತಿಳಿಸಿದ್ದಾರೆ.

Related posts

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

Suddi Udaya

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಭೇಟಿ

Suddi Udaya
error: Content is protected !!