25.3 C
ಪುತ್ತೂರು, ಬೆಳ್ತಂಗಡಿ
June 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

ಕಳಿಯ: ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ಹೆದ್ದಾರಿ ಗೇರುಕಟ್ಟೆ ಸಮೀಪದ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ರುಕ್ಮಯ ಗೌಡ (53ವ) ಅವರಿಗೆ ಅತೀ ವೇಗವಾಗಿ ಚಲಿಸುತ್ತಿದ್ದ ಅಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಎ.29 ರಾತ್ರಿ ನಡೆಯಿತು.

ಅತೀ ವೇಗವಾಗಿ ಚಲಾಯಿಸಿ ಕೊಂಡು ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಕಾಲು,ತಲೆ,ಮುಖಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ಸ್ಥಳೀಯರು ತಕ್ಷಣ ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿ ಮಂಗಳೂರು ಆಸ್ಪತ್ರೆಗೆ ಸೇರಿಸಲಾಯಿತು.

ಘಟನೆ ವಿವರ: ಉಪ್ಪಿನಂಗಡಿ ಕಡೆಯಿಂದ ಬಳೆಂಜ ಕಾಫಿನಡ್ಕ ಸಮೀಪದ ನಿವಾಸಿಗಳು ಮೂರು ಕಾರುಗಳು ಒಂದರ ಹಿಂದೆ ಒಂದರಂತೆ ಹಿಂದಿಕ್ಕಿಲು ಭರಾಟೆ ಯಲ್ಲಿ ಬರುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆಯಿತು ಎಂದು ಸ್ಥಳೀಯರು ಹೇಳುತ್ತಾರೆ. ಬೆಳ್ತಂಗಡಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ತನಿಖೆ ನಡೆಯುತ್ತಿದೆ.

Related posts

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya
error: Content is protected !!