27 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಏ.30ರಂದು ರಾತ್ರಿ ವೇಳೆ ಘಾಟಿ ರಸ್ತೆಯಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ವಲ್ಪ ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದವು.

ಏ.30ರಂದು ರಾತ್ರಿ ವೇಳೆ ಚಾರ್ಮಾಡಿ ಘಾಟಿ ರಸ್ತೆಯ ಆರನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿತ್ತು. ಇದನ್ನು ಗಮನಿಸಿದ ವಾಹನ ಸವಾರರು ಇತರ ವಾಹನಗಳಿಗೆ ನಿಲ್ಲುವಂತೆ ಸೂಚನೆ ನೀಡಿದ್ದರು. ಘಾಟಿ ರಸ್ತೆಯಲ್ಲಿ ಮೊಬೈಲ್ ನೆಟ್ವರ್ಕ್ ಸಿಗದ ಹಿನ್ನೆಲೆಯಲ್ಲಿ ವಾಹನ ಸವಾರರು ಚೆಕ್ ಪೋಸ್ಟ್‌ನಲ್ಲಿ ಆನೆ ಸಂಚರಿಸುತ್ತಿರುವ ವಿಷಯ ತಿಳಿಸಿದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಬಂದು, ಯಾರೂ ತೆರಳದಂತೆ ಸೂಚನೆ ನೀಡಿದರು. ಕಾಡಾನೆ ಆರನೇ ತಿರುವಿನಿಂದ ಒಂಬತ್ತನೇ ತಿರುವಿನತ್ತ ಹೋಗಿ ಬಳಿಕ ಬಾಂಜಾರು ಕಾಡಿನತ್ತ ತೆರಳಿದೆ ಎಂದು ಅರಣ್ಯ ಇಲಾಖೆ ಸಿಬಂದಿ ಮಾಹಿತಿ ನೀಡಿದ್ದಾರೆ. ಇದೇ ಒಂಟಿ ಕಾಡಾನೆ ಬುಧವಾರವೂ ಚಾರ್ಮಾಡಿ ಘಾಟರಸ್ತೆಯಲ್ಲಿ ತಿರುಗಾಡುತ್ತಿತ್ತು ಎಂದು ಜನರು ತಿಳಿಸಿದ್ದಾರೆ.

Related posts

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya
error: Content is protected !!