28.1 C
ಪುತ್ತೂರು, ಬೆಳ್ತಂಗಡಿ
September 15, 2026
ನಿಧನಪೊಲೀಸ್ಪ್ರಮುಖ ಸುದ್ದಿಸಮಸ್ಯೆ

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಗಳ ಎರಡನೇ ಪುತ್ರಿ ರಮ (19) ಎಂಬಾಕೆ ಕಳೆದ ಎ.25 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು, ಆದ್ರೆ ಚಿಕಿತ್ಸೆ ಫಲಿಸದೆ ರಮ ಎ.29 ರಂದು ರಾತ್ರಿ 12 ಗಂಟೆಗೆ ಸಾವನ್ನಪ್ಪಿದ್ದಾಳೆ.

ರಮ ವಾಮದಪದವು ಕಾಲೇಜ್ ನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಯುವಕನೊಬ್ಬನ ಜೊತೆ ಪ್ರೀತಿ ಮಾಡುತ್ತಿದ್ದಳು. ಈ ವಿಚಾರ ಎರಡು ಮನೆಯವರಿಗೂ ತಿಳಿದು ಒಪ್ಪಿಗೆ ಸೂಚಿಸಿದ್ದರು. ರಮಾ ತಂದೆ ಕಾಲೇಜ್ ಮುಗಿಯುವ ಒಂದು ವರ್ಷದ ಬಳಿಕ ಮದುವೆ ಮಾಡಿಕೊಡುವುದಾಗಿ ತಿಳಿಸಿದ್ದರು. ಆದ್ರೆ ರಮಾ ಮುಂದಕ್ಕೆ ತಂದೆ ಮದುವೆ ಮಾಡದೆ ಇದ್ರೆ ಎಂದು ಭಯಗೊಂಡು ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30 ರಂದು ಆತ್ಮಹತ್ಯೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ನಾಲ್ಕೂರು: ಮೋನಪ್ಪ ಪೂಜಾರಿ ಖಂಡಿಗ ನಿಧನ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!