April 30, 2026
Uncategorized

ಮೇ 15: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿದೈವಸ್ಥಾನದಲ್ಲಿ ಸಂಕ್ರಮಣ ಪೂಜೆ : ಉಚಿತ ಬರೆಯುವ ಪುಸ್ತಕ ವಿತರಣೆಯ ಅರ್ಜಿ ಫಾರ್ಮ್‌ಗಳ ವಿತರಣೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿದೈವಸ್ಥಾನದಲ್ಲಿ ಮೇ.15 ಶುಕ್ರವಾರ ನಡೆಯಲಿರುವ ಸಂಕ್ರಾಮಣ ಪೂಜೆಯ ದಿನದಂದು 2026ನೇ ಸಾಲಿಗೆ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆಯ ಅರ್ಜಿ ಫಾರಂಗಳನ್ನು ವಿತರಿಸಲಾಗುವುದು ಎಂದು ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ ಅವರು ತಿಳಿಸಿದ್ದಾರೆ.
ದೈವಸ್ಥಾನದ ಆದಾಯದಿಂದ ಬಡ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ವರ್ಷ ಅಳದಂಗಡಿ ಅರಮನೆ ವ್ಯಾಪ್ತಿಯ ಹಾಗೂ ತಾಲೂಕು ಹೊರ ತಾಲೂಕಿನ ಮಕ್ಕಳಿಗೆ ಉಚಿತವಾಗಿ ಬರೆಯುವ ಪುಸ್ತಕವನ್ನು ನೀಡಲಾಗುತ್ತಿದೆ. ಅದರಂತೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಕಾರ್ಯಕ್ರಮವಿದ್ದು, ಇದರ ಅರ್ಜಿ ಫಾರಂಗಳನ್ನು ಮೇ 15ರಂದು ಶುಕ್ರವಾರ ದೈವಸ್ಥಾನದಲ್ಲಿ ನಡೆಯುವ ಸಂಕ್ರಮಣ ಪೂಜೆಯಂದು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

Related posts

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

Suddi Udaya
error: Content is protected !!