ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕಾರ್ನಾಡು, ಮುಲ್ಕಿ ಇಲ್ಲಿ ನಡೆಯಲಿದೆ.
ಈ ಸುಸಂದರ್ಭದಲ್ಲಿ 2025-26ರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ದ.ಕ ಜಿಲ್ಲಾ ಪಂಚಾಯತಿಯಿಂದ ಪಡೆದ ವರದಿಯಂತೆ ಜಿಲ್ಲಾ ಮಟ್ಟದಲ್ಲಿ ಬಂದಾರು ಗ್ರಾಮ ಪಂಚಾಯತ್ ಅತ್ಯಧಿಕ ಮಾನವ ದಿನಗಳನ್ನು ಸೃಜಿಸಿದ್ದು ಪ್ರಥಮ ಸ್ಥಾನಕ್ಕೆ ಆಯ್ಕೆಯಾಗಿದ್ದು, ಕಾರ್ಯಕ್ರಮದಲ್ಲಿ ಈ ಪಂಚಾಯತನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.













