August 1, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

ಕಳಿಯ: ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ಹೆದ್ದಾರಿ ಗೇರುಕಟ್ಟೆ ಸಮೀಪದ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ರುಕ್ಮಯ ಗೌಡ (53ವ) ಅವರಿಗೆ ಅತೀ ವೇಗವಾಗಿ ಚಲಿಸುತ್ತಿದ್ದ ಅಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಎ.29 ರಾತ್ರಿ ನಡೆಯಿತು.

ಅತೀ ವೇಗವಾಗಿ ಚಲಾಯಿಸಿ ಕೊಂಡು ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಕಾಲು,ತಲೆ,ಮುಖಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ಸ್ಥಳೀಯರು ತಕ್ಷಣ ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿ ಮಂಗಳೂರು ಆಸ್ಪತ್ರೆಗೆ ಸೇರಿಸಲಾಯಿತು.

ಘಟನೆ ವಿವರ: ಉಪ್ಪಿನಂಗಡಿ ಕಡೆಯಿಂದ ಬಳೆಂಜ ಕಾಫಿನಡ್ಕ ಸಮೀಪದ ನಿವಾಸಿಗಳು ಮೂರು ಕಾರುಗಳು ಒಂದರ ಹಿಂದೆ ಒಂದರಂತೆ ಹಿಂದಿಕ್ಕಿಲು ಭರಾಟೆ ಯಲ್ಲಿ ಬರುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆಯಿತು ಎಂದು ಸ್ಥಳೀಯರು ಹೇಳುತ್ತಾರೆ. ಬೆಳ್ತಂಗಡಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ತನಿಖೆ ನಡೆಯುತ್ತಿದೆ.

Related posts

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya
error: Content is protected !!