25.4 C
ಪುತ್ತೂರು, ಬೆಳ್ತಂಗಡಿ
September 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

ಕಳಿಯ: ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ಹೆದ್ದಾರಿ ಗೇರುಕಟ್ಟೆ ಸಮೀಪದ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ರುಕ್ಮಯ ಗೌಡ (53ವ) ಅವರಿಗೆ ಅತೀ ವೇಗವಾಗಿ ಚಲಿಸುತ್ತಿದ್ದ ಅಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಎ.29 ರಾತ್ರಿ ನಡೆಯಿತು.

ಅತೀ ವೇಗವಾಗಿ ಚಲಾಯಿಸಿ ಕೊಂಡು ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಕಾಲು,ತಲೆ,ಮುಖಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ಸ್ಥಳೀಯರು ತಕ್ಷಣ ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿ ಮಂಗಳೂರು ಆಸ್ಪತ್ರೆಗೆ ಸೇರಿಸಲಾಯಿತು.

ಘಟನೆ ವಿವರ: ಉಪ್ಪಿನಂಗಡಿ ಕಡೆಯಿಂದ ಬಳೆಂಜ ಕಾಫಿನಡ್ಕ ಸಮೀಪದ ನಿವಾಸಿಗಳು ಮೂರು ಕಾರುಗಳು ಒಂದರ ಹಿಂದೆ ಒಂದರಂತೆ ಹಿಂದಿಕ್ಕಿಲು ಭರಾಟೆ ಯಲ್ಲಿ ಬರುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆಯಿತು ಎಂದು ಸ್ಥಳೀಯರು ಹೇಳುತ್ತಾರೆ. ಬೆಳ್ತಂಗಡಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ತನಿಖೆ ನಡೆಯುತ್ತಿದೆ.

Related posts

ರಾಷ್ಟ್ರೀಯ ಮಟ್ಟದ ತರಬೇತಿದಾರರ ತಂಡದಿಂದ ಧರ್ಮಸ್ಥಳದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಂವಾದ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya
error: Content is protected !!