August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಏ.30ರಂದು ರಾತ್ರಿ ವೇಳೆ ಘಾಟಿ ರಸ್ತೆಯಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ವಲ್ಪ ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದವು.

ಏ.30ರಂದು ರಾತ್ರಿ ವೇಳೆ ಚಾರ್ಮಾಡಿ ಘಾಟಿ ರಸ್ತೆಯ ಆರನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿತ್ತು. ಇದನ್ನು ಗಮನಿಸಿದ ವಾಹನ ಸವಾರರು ಇತರ ವಾಹನಗಳಿಗೆ ನಿಲ್ಲುವಂತೆ ಸೂಚನೆ ನೀಡಿದ್ದರು. ಘಾಟಿ ರಸ್ತೆಯಲ್ಲಿ ಮೊಬೈಲ್ ನೆಟ್ವರ್ಕ್ ಸಿಗದ ಹಿನ್ನೆಲೆಯಲ್ಲಿ ವಾಹನ ಸವಾರರು ಚೆಕ್ ಪೋಸ್ಟ್‌ನಲ್ಲಿ ಆನೆ ಸಂಚರಿಸುತ್ತಿರುವ ವಿಷಯ ತಿಳಿಸಿದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಬಂದು, ಯಾರೂ ತೆರಳದಂತೆ ಸೂಚನೆ ನೀಡಿದರು. ಕಾಡಾನೆ ಆರನೇ ತಿರುವಿನಿಂದ ಒಂಬತ್ತನೇ ತಿರುವಿನತ್ತ ಹೋಗಿ ಬಳಿಕ ಬಾಂಜಾರು ಕಾಡಿನತ್ತ ತೆರಳಿದೆ ಎಂದು ಅರಣ್ಯ ಇಲಾಖೆ ಸಿಬಂದಿ ಮಾಹಿತಿ ನೀಡಿದ್ದಾರೆ. ಇದೇ ಒಂಟಿ ಕಾಡಾನೆ ಬುಧವಾರವೂ ಚಾರ್ಮಾಡಿ ಘಾಟರಸ್ತೆಯಲ್ಲಿ ತಿರುಗಾಡುತ್ತಿತ್ತು ಎಂದು ಜನರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya
error: Content is protected !!