April 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

ಧರ್ಮಸ್ಥಳ : ನಾಡಿನ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಎ.೨೯ರಂದು ಸಂಜೆ 6.48ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವೇದ ಘೋಷ ಮಂತ್ರ ಪಠಣದೊಂದಿಗೆ ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೋಡಿ ಸತಿ-ಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಕಣ ವಿತರಿಸಿದರು. ಸಂಜೆ ವಧು-ವರರು ಶ್ರೀಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಮೆರವಣಿಗೆಯಲ್ಲಿ ಆಗಮಿಸಿದರು.

ಡಾ. ಹೆಗ್ಗಡೆ, ಶ್ರೀಮತಿ ಹೇಮಾವತಿ ವೀ. ಹೆಗ್ಗಡೆ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಅತಿಥಿಗಣ್ಯರು ವಧುವಿಗೆ ಮಂಗಳ ಸೂತ್ರ ವಿತರಿಸಿ, ಹಾರ ವಿನಿಮಯ ಮತ್ತು ಮಾಂಗಲ್ಯಧಾರಣೆಯೊಂದಿಗೆ ಆಯಾ ಜಾತಿ-ಸಂಪ್ರದಾಯದ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಧು-ವರರು ಗೃಹಸ್ಥಾಶ್ರಮಕ್ಕೆ ಪ್ರವೇಶಿಸಿದರು. ಅವರವರ ಜಾತಿ ಸಂಪ್ರದಾಯದAತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು. ಸುಶ್ರಾವ್ಯವಾದ ಶೋಭಾನೆ ಹಾಡುಗಳು, ವಧು-ವರರಿಗೆ ಆರತಿ ಕಾರ್ಯಕ್ರಮ ಮದುವೆಗೆ ವಿಶೇಷ ಮೆರಗನ್ನು ನೀಡಿತು. ಧರ್ಮಸ್ಥಳದ ವತಿಯಿಂದ ನೂತನ ದಂಪತಿಗಳಿಗೆ ವಿಶೇಷ ಉಡುಗೊರೆ ನೀಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ೧೯೭೨ರಿಂದ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಗೊಂಡು, ಒಂದು ವರ್ಷ ೪೮೪ ದಾಖಲೆ ಮದುವೆ ನಡೆದಿತ್ತು. ವಿವಾಹಕ್ಕಾಗಿ ಸಾಲ ಮಾಡಿ ಸಂಕಷ್ಟ ಪಡುತ್ತಿರುವುದನ್ನು ಕಂಡು ಸಾಮೂಹಿಕ ವಿವಾಹದ ಕಲ್ಪನೆ ಮೂಡಿತು. ಸಾಮೂಹಿಕ ವಿವಾಹದಲ್ಲಿ ಮದುವೆ ಆದವರು ದುಂದುವೆಚ್ಚ, ಅನಗತ್ಯ ವೆಚ್ಚ ಮಾಡಬಾರದು ಎಂದು ಸಲಹೆ ನೀಡಿದರು. ಸಾಮೂಹಿಕ ವಿವಾಹ ಇಂದು ಹೆಚ್ಚು ಜನಪ್ರಿಯವಾಗುತ್ತಿದ್ದು ತಮಗೆ ಧನ್ಯತಾಭಾವ ಮೂಡಿಬಂದಿದೆ. ಇಲ್ಲಿ ವಿವಾಹ ಆದವರು ಸರಳ ಹಾಗೂ ಆದರ್ಶ ಜೀವನ ನಡೆಸಬೇಕು. ಉಚಿತ ಸಾಮೂಹಿಕ ವಿವಾಹಕ್ಕೆ ಕೊಡುಗೆ ನೀಡಿದವರು ಪುಣ್ಯಭಾಗಿಗಳಾಗಿದ್ದಾರೆ ಎಂದು ಹೆಗ್ಗಡೆಯವರು ತಿಳಿಸಿದರು.

ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಮಾತನಾಡಿ, ಕಳೆದ 54 ವರ್ಷಗಳ ಹಿಂದೆ ಪೂಜ್ಯ ಹೆಗ್ಗಡೆಯವರು ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಿದರು. ಇಲ್ಲಿ ಸಾವಿರಾರು ಮಂದಿ ದಾಂಪತ್ಯ ಜೀವನಕ್ಕೆ ಮುನ್ನುಡಿಯಾಗಿದ್ದಾರೆ. ಹೆಗ್ಗಡೆಯವರ ಜೀವನವೇ ನಮಗೆ ಆದರ್ಶವಾಗಿದೆ ಎಂದು ಹೇಳಿದರು.

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನೇಕ ಸಾಮಾಜಿಕ ಕಾರ್ಯಗಳನ್ನು ನಡೆಸಲಾಗುತ್ತಿದೆ. ಹಿಂದೆ ಮದುವೆಗಾಗಿ ಸಾಲ ಮಾಡಿ ಸಂಕಷ್ಟಗಳನ್ನು ಕುಟುಂಬ ಅನುಭವಿಸುವುದನ್ನು ಕಂಡು ಹೆಗ್ಗಡೆಯವರು ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಿದರು. ಸರಳವಾಗಿ ಈ ಕಾರ್ಯಕ್ರಮ ನಡೆಯುತ್ತದೆ. ಇದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಇದುವರೆಗೆ ೧೩ ಸಾವಿರ ಮದುವೆ ನಡೆದು ಕುಟುಂಬ ನೆಮ್ಮದಿಯಿಂದ ಬಾಳುವಂತಾಗಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಶುಭ ಕೋರಿದರು. ವೇದಿಕೆಯಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಬೆಂಗಳೂರು ಕ್ಷೇಮವನದ ಸಿಇಒ ಶ್ರೀಮತಿ ಶ್ರದ್ಧಾ ಅಮಿತ್, ಶ್ರೀಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಶ್ರೀಮತಿ ಸೌಮ್ಯ ಸುಭಾಷ್ ಮತ್ತು ಶ್ರೀಮತಿ ಮಂಜುಳಾ ಮಲ್ಲಿನಾಥ್ ಇವರ ಪ್ರಾರ್ಥನೆ ಬಳಿಕ ಬೆಂಗಳೂರು ಕ್ಷೇಮವನದ ಸಿಇಒ ಶ್ರೀಮತಿ ಶ್ರದ್ಧಾ ಅಮಿತ್ ಸ್ವಾಗತಿಸಿದರು. ವಸಂತ ಮಂಜಿತ್ತಾಯ ಮತ್ತು ಬಳಗ ವೇದ ಘೋಷ ಮಾಡಿದರು. ಎಸ್.ಡಿ.ಎಂ. ಸನಿವಾಸ ಕಾಲೇಜಿನ ಡಾ.ಸುನೀಲ್ ಪಂಡಿತ್ ದಾಂಪತ್ಯ ದೀಕ್ಷೆ ಬೋಧಿಸಿದರು. ಸಂಪತ್ ಕುಮಾರ್ ಹಾಗೂ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು. ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ ಧನ್ಯವಾದವಿತ್ತರು.

ದ.ಕ ಜಿಲ್ಲೆಯಿಂದ 7ಜೋಡಿ: ಬೆಳ್ತಂಗಡಿ 2, ಕಡಬ 2, ಬಂಟ್ವಾಳ 1, ಸುಳ್ಯ 1ಸೇರಿ ಒಟ್ಟು 7 ಜೋಡಿ ವಿವಾಹವಾಗಿದ್ದಾರೆ. ವಿವಾಹವಾದರಲ್ಲಿ ಸರ್ಕಾರಿ ನೌಕರ 1, ಕೂಲಿ, 41 ಮಂದಿ ಬೇಸಾಯ, 12 ಮಂದಿ ವ್ಯಾಪಾರ, 5 ಮಂದಿ ಚಾಲಕರು, 12 ಮಂದಿ ಖಾಸಗಿ ಉದ್ಯೋಗಿಗಳು, 30 ಮಂದಿ ಮರದ ಕೆಲಸದವರು 5 ಮಂದಿ ಒಳಗೊಂಡಿದೆ ದ್ದಾರೆ. ಉಡುಪಿ 8 ಚಿಕ್ಕಮಗಳೂರು 8, ಶಿವಮೊಗ್ಗ 20, ಬೆಂಗಳೂರು 5,ಮೈಸೂರು 11, ಹಾವೇರಿ 8, ದಾವಣಗೆರೆ 1, ಧಾರವಾಡ 2, ಉತ್ತರ ಕನ್ನಡ 2, ಚಿತ್ರದುರ್ಗ 2, ಮಂಡ್ಯ 2, ರಾಮನಗರ 1,ಚಾಮರಾಜನಗರ 14, ಬಳ್ಳಾರಿ 1, ಕೊಪ್ಪಳ 1, ತುಮಕೂರು 3, ಬೆಳಗಾವಿ 1 ಗದಗ 2, ವಿಜಯಪುರ 1, ವಿಜಯನಗರ 3, ಹಾಸನ ೨, ಕೊಡಗು 1, ಹೊರ ರಾಜ್ಯಗಳಾದ ಆಂಧ್ರಪ್ರದೇಶ 1 ಒಟ್ಟು ವಿವಾಹಗಳು 106 ಇದುವರೆಗೆ ಒಟ್ಟು 13,100 ಮದುವೆಯಾಗಿದೆ.

Related posts

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya
error: Content is protected !!