28.1 C
ಪುತ್ತೂರು, ಬೆಳ್ತಂಗಡಿ
September 15, 2026
ನಿಧನಪೊಲೀಸ್ಪ್ರಮುಖ ಸುದ್ದಿಸಮಸ್ಯೆ

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಗಳ ಎರಡನೇ ಪುತ್ರಿ ರಮ (19) ಎಂಬಾಕೆ ಕಳೆದ ಎ.25 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು, ಆದ್ರೆ ಚಿಕಿತ್ಸೆ ಫಲಿಸದೆ ರಮ ಎ.29 ರಂದು ರಾತ್ರಿ 12 ಗಂಟೆಗೆ ಸಾವನ್ನಪ್ಪಿದ್ದಾಳೆ.

ರಮ ವಾಮದಪದವು ಕಾಲೇಜ್ ನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಯುವಕನೊಬ್ಬನ ಜೊತೆ ಪ್ರೀತಿ ಮಾಡುತ್ತಿದ್ದಳು. ಈ ವಿಚಾರ ಎರಡು ಮನೆಯವರಿಗೂ ತಿಳಿದು ಒಪ್ಪಿಗೆ ಸೂಚಿಸಿದ್ದರು. ರಮಾ ತಂದೆ ಕಾಲೇಜ್ ಮುಗಿಯುವ ಒಂದು ವರ್ಷದ ಬಳಿಕ ಮದುವೆ ಮಾಡಿಕೊಡುವುದಾಗಿ ತಿಳಿಸಿದ್ದರು. ಆದ್ರೆ ರಮಾ ಮುಂದಕ್ಕೆ ತಂದೆ ಮದುವೆ ಮಾಡದೆ ಇದ್ರೆ ಎಂದು ಭಯಗೊಂಡು ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30 ರಂದು ಆತ್ಮಹತ್ಯೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya
error: Content is protected !!