August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

ಬೆಳ್ತಂಗಡಿ: ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ.ಕ. ಜಿಲ್ಲೆ ಇದರ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆಯು ಮೇ 1ರಂದು ಬೆಳ್ತಂಗಡಿ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ್ ಸುದೆಮುಗೇರು ವಹಿಸಿದ್ದರು. ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ದೀಪ ಪ್ರಜ್ವಲನೆಗೊಳಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅಥಿತಿಗಳಾಗಿ ಜಿಲ್ಲಾ ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಎಸ್.ಪಿ., ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬಿ.ಕೆ. ವಸಂತ, ಸಂ. ಸಂಚಾಲಕರು ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗ, ರಮೇಶ್ ಆರ್, ಸಂಚಾಲಕರು ದಸಂಸ (ಅಂಬೇಡ್ಕರ್ ವಾದ), ಬೆಳ್ತಂಗಡಿ ತಾಲೂಕು ಘಟಕ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ ಅಧ್ಯಕ್ಷೆ ರೇಣುಕಾ, ಪ್ರೇಮ್ ಬಲ್ಲಾಳ್ ಬಾಗ್, ದಲಿತ ಸಂಘಟಕ ರಘು ಧರ್ಮ ಸೇನಾ ಉಪಸ್ಥಿತರಿದ್ದರು.

2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪೌರ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಲಾಯಿತು. ಶೇಖರ್ ಲಾಯಿಲ ನಿರೂಪಿಸಿದರು. ಶಿವಕುಮಾರ್ ಸ್ವಾಗತಿಸಿದರು.

Related posts

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!