ಬೆಳ್ತಂಗಡಿ: ಕಿನಾರೆ ಕ್ರೀಡಾ ಸಂಘ ಮಲವಂತಿಗೆ ದಿಡುಪೆ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ಆಶ್ರಯದಲ್ಲಿ ನಡೆದಂತಹ ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಇವರ ಮೂಲಕ ಏ.30ರಂದು ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ., ಜಗದೀಶ್ ಕೆ
ಆಡಳಿತ ಅಧಿಕಾರಿ ಮೈ ಭಾರತ್ ದ. ಕ ಜಿಲ್ಲೆ ಹಾಗೂ ನಿಶಾಂಕ್ ಗೌಡ ವಕೀಲರು ಬೆಳ್ತಂಗಡಿ, ಸಂದೀಪ್ ಗೌಡ, ಮೋಹಿನಿ ಗಂಗಾಧರ ಗೌಡ, ವಿವಿಧ ಗಣ್ಯರು ಕ್ರೀಡಾಪಟುಗಳು ಭಾಗವಹಿಸಿದ್ದರು. ಮೈ ಭಾರತ್ ದ.ಕ ಜಿಲ್ಲಾ ತಾಲೂಕು ಪ್ರತಿನಿಧಿ ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ ವಂದಿಸಿದರು













