24.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಿವಾಸಿ ಮಂಜುನಾಥ. ಇ(47) ರವರು ದಿನಾಂಕ 29-04-2026 ರಂದು ತನ್ನ ಮಗಳ ಮದುವೆಗೆಂದು ಮನೆಯವರ ಜೊತೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದವರು ದೇವರ ದರ್ಶನ ಮುಗಿಸಿ ದೇವಸ್ಥಾನದ ಮುಂಭಾಗದಲ್ಲಿರುವ ಬೃಂದಾವನ ಪಾರ್ಕಿಗೆ ಹೋಗಿ ವಾಪಾಸ್ಸು ಬರುವ ಸಮಯ ಬೆಳಿಗ್ಗೆ 11:30 ಗಂಟೆ ಸುಮಾರಿಗೆ ದೇವಸ್ಥಾನ ಮುಂಭಾಗದಿಂದ ಕಾಣೆಯಾಗಿರುತ್ತಾರೆ. ಈ ಬಗ್ಗೆ ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ಮೇ.1 ರಂದು ನಾಪತ್ತೆಯಾದ ಮಂಜುನಾಥ್ ಅವರ ಚಿಕ್ಕಪ್ಪನ ಮಗ ದಿನೇಶ್ ಪಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾಣೆಯಾದ ಮಂಜುನಾಥ್.ಇ(47) ತಂದೆಯ ಹೆಸರು: ದಿ| ಈಶ್ವರಪ್ಪ, ಸುಮಾರು 5 ಅಡಿ ಎತ್ತರ, ಸಪೂರ ಶರೀರ, ಕಪ್ಪು ಮೈಬಣ್ಣ, ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ಕಪ್ಪು ಪ್ಯಾಂಟ್‌ ಧರಿಸಿರುತ್ತಾರೆ. ಭಾಷೆ: ಕನ್ನಡ ಮಾತಾನಾಡುತ್ತಾರೆ. ಕಾಣೆಯಾದ ವ್ಯಕ್ತಿ ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸಬೇಕಾಗಿ ಧರ್ಮಸ್ಥಳ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya
error: Content is protected !!