30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಿವಾಸಿ ಮಂಜುನಾಥ. ಇ(47) ರವರು ದಿನಾಂಕ 29-04-2026 ರಂದು ತನ್ನ ಮಗಳ ಮದುವೆಗೆಂದು ಮನೆಯವರ ಜೊತೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದವರು ದೇವರ ದರ್ಶನ ಮುಗಿಸಿ ದೇವಸ್ಥಾನದ ಮುಂಭಾಗದಲ್ಲಿರುವ ಬೃಂದಾವನ ಪಾರ್ಕಿಗೆ ಹೋಗಿ ವಾಪಾಸ್ಸು ಬರುವ ಸಮಯ ಬೆಳಿಗ್ಗೆ 11:30 ಗಂಟೆ ಸುಮಾರಿಗೆ ದೇವಸ್ಥಾನ ಮುಂಭಾಗದಿಂದ ಕಾಣೆಯಾಗಿರುತ್ತಾರೆ. ಈ ಬಗ್ಗೆ ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ಮೇ.1 ರಂದು ನಾಪತ್ತೆಯಾದ ಮಂಜುನಾಥ್ ಅವರ ಚಿಕ್ಕಪ್ಪನ ಮಗ ದಿನೇಶ್ ಪಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾಣೆಯಾದ ಮಂಜುನಾಥ್.ಇ(47) ತಂದೆಯ ಹೆಸರು: ದಿ| ಈಶ್ವರಪ್ಪ, ಸುಮಾರು 5 ಅಡಿ ಎತ್ತರ, ಸಪೂರ ಶರೀರ, ಕಪ್ಪು ಮೈಬಣ್ಣ, ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ಕಪ್ಪು ಪ್ಯಾಂಟ್‌ ಧರಿಸಿರುತ್ತಾರೆ. ಭಾಷೆ: ಕನ್ನಡ ಮಾತಾನಾಡುತ್ತಾರೆ. ಕಾಣೆಯಾದ ವ್ಯಕ್ತಿ ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸಬೇಕಾಗಿ ಧರ್ಮಸ್ಥಳ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya
error: Content is protected !!