August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

ಬೆಳ್ತಂಗಡಿ: ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ.ಕ. ಜಿಲ್ಲೆ ಇದರ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆಯು ಮೇ 1ರಂದು ಬೆಳ್ತಂಗಡಿ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ್ ಸುದೆಮುಗೇರು ವಹಿಸಿದ್ದರು. ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ದೀಪ ಪ್ರಜ್ವಲನೆಗೊಳಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅಥಿತಿಗಳಾಗಿ ಜಿಲ್ಲಾ ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಎಸ್.ಪಿ., ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬಿ.ಕೆ. ವಸಂತ, ಸಂ. ಸಂಚಾಲಕರು ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗ, ರಮೇಶ್ ಆರ್, ಸಂಚಾಲಕರು ದಸಂಸ (ಅಂಬೇಡ್ಕರ್ ವಾದ), ಬೆಳ್ತಂಗಡಿ ತಾಲೂಕು ಘಟಕ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ ಅಧ್ಯಕ್ಷೆ ರೇಣುಕಾ, ಪ್ರೇಮ್ ಬಲ್ಲಾಳ್ ಬಾಗ್, ದಲಿತ ಸಂಘಟಕ ರಘು ಧರ್ಮ ಸೇನಾ ಉಪಸ್ಥಿತರಿದ್ದರು.

2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪೌರ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಲಾಯಿತು. ಶೇಖರ್ ಲಾಯಿಲ ನಿರೂಪಿಸಿದರು. ಶಿವಕುಮಾರ್ ಸ್ವಾಗತಿಸಿದರು.

Related posts

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!