May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ಬಿಡಿ ಭಾಗಗಳ ತಯಾರಿಕಾ ಕಂಪೆನಿಯಾದ ಭವಾನಿ ಇಂಡಸ್ಟ್ರೀಸ್ ವತಿಯಿಂದ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.

ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿ ಲೋಕೆಶ್‌ ರೆಡ್ಡಿಯವರು ಸಂದರ್ಶನವನ್ನು ನಡೆಸಿದರು. ಫಿಟ್ಟರ್ ಮತ್ತು ಟರ್ನರ್ ವಿಭಾಗದ ಒಟ್ಟು 32 ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕೆಶ್‌ ರೆಡ್ಡಿಯವರು ಕೈಗಾರಿಕಾ ವಲಯದಲ್ಲಿ ಐಟಐ ವಿದ್ಯಾರ್ಥಿಗಳಿಗಿರುವ ಬೃಹತ್‌ ಉದ್ಯೋಗ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಸ್ವಾಗತಿಸಿದರು. ನೇಮಕಾತಿ ಅಧಿಕಾರಿ ಶ್ರೇಯಸ್ ಹಾಗೂ ಕಿರಿಯ ತರಬೇತಿ ಅಧಿಕಾರಿಗಳಾದ ಕುಶ ಮತ್ತು ಶ್ರವಣ್ ಅವರು ಸಂದರ್ಶನ ಪ್ರಕ್ರಿಯೆಯಲ್ಲಿ ಸಹಕರಿಸಿದರು.

Related posts

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
error: Content is protected !!