August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಅಭಿವೃದ್ಧಿಗೆ ಶಕ್ತಿ ತುಂಬಿದ್ದಾರೆ. ಸಾವಿರಾರು ಕೋಟಿ ರೂ. ಅನುದಾನ ಒದಗಿಸಿದ ಕಾಮಧೇನು ಮುಖ್ಯಮಂತ್ರಿ ಯುಡಿಯೂರಪ್ಪನವರು.ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನಿಂದ 2500 ಮಂದಿ ಭಾಗವಹಿಸಲಿದ್ದಾರೆ. ಆಗಮಿಸುವರಿಗೆ ಬಸ್ ವ್ಯವಸ್ಥೆ ಮಾಡಲಾಗುವುದು, ಅಭಿಮಾನೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ವಿವಿಧ ಗಣ್ಯರು ಹಾಗೂ ನಾಡಿನ ಸ್ವಾಮೀಜಿಗಳು ಸೇರಿದ್ದಂತೆ ಲಕ್ಷ ಮಂದಿ ಜನರು ಭಾಗವಹಿಸುವರು ಎಂದು ಶಾಸಕ ಹರೀಶ್ ಪೂಂಜ ವಿವರಿಸಿದರು.

ಅವರು ಮೇ 2 ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ೫೦ ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆಗೊಳಿಸಿ ಮಾಧ್ಯಮದೊಂದಿಗೆ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ , ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯನಂದ ಗೌಡ ಮತ್ತು ಪ್ರಶಾಂತ್ ಪಾರೆಂಕಿ, ಪ್ರಮುಖರಾದ ವಸಂತಿ ಮಚ್ಚಿನ, ಸೀತರಾಮ ಬೆಳಾಲು ಸಹಿತ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Related posts

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!