32.2 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ಬಿಡಿ ಭಾಗಗಳ ತಯಾರಿಕಾ ಕಂಪೆನಿಯಾದ ಭವಾನಿ ಇಂಡಸ್ಟ್ರೀಸ್ ವತಿಯಿಂದ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.

ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿ ಲೋಕೆಶ್‌ ರೆಡ್ಡಿಯವರು ಸಂದರ್ಶನವನ್ನು ನಡೆಸಿದರು. ಫಿಟ್ಟರ್ ಮತ್ತು ಟರ್ನರ್ ವಿಭಾಗದ ಒಟ್ಟು 32 ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕೆಶ್‌ ರೆಡ್ಡಿಯವರು ಕೈಗಾರಿಕಾ ವಲಯದಲ್ಲಿ ಐಟಐ ವಿದ್ಯಾರ್ಥಿಗಳಿಗಿರುವ ಬೃಹತ್‌ ಉದ್ಯೋಗ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಸ್ವಾಗತಿಸಿದರು. ನೇಮಕಾತಿ ಅಧಿಕಾರಿ ಶ್ರೇಯಸ್ ಹಾಗೂ ಕಿರಿಯ ತರಬೇತಿ ಅಧಿಕಾರಿಗಳಾದ ಕುಶ ಮತ್ತು ಶ್ರವಣ್ ಅವರು ಸಂದರ್ಶನ ಪ್ರಕ್ರಿಯೆಯಲ್ಲಿ ಸಹಕರಿಸಿದರು.

Related posts

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya
error: Content is protected !!